ಮಂಗಳೂರು: ಸುರತ್ಕಲ್ ಟೋಲ್ ತೆರವುಗೊಳಿಸುವಂತೆ ಆಗ್ರಹಿಸಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಸಂಯಮವಾಗಿ ವರ್ತಿಸುವಂತೆ ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಸೂಚನೆ ನೀಡಿದರು.
ಮಂಗಳವಾರ ಬೆಳಿಗ್ಗೆ ಪ್ರತಿಭಟನೆಯ ಪೊಲೀಸ್ ಬಂದೋಬಸ್ತು ಪರೀಶೀಲನೆ ನಡೆಸಿ ಬಳಿಕ ಅಧಿಕಾರಿ ಮತ್ತು ಸಿಬಂದಿಗಳಿಗೆ ಸೂಚನೆ ನೀಡಿದ ಅವರು ಟೋಲ್ ಮುಚ್ಚುವಂತೆ ಆಗ್ರಹಿಸಿ ಹಲವಾರು ವರ್ಷಗಳಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಕೂಡ ಪ್ರತಿಭಟನೆ ಆಯೋಜಿಸಲಾಗಿದೆ ಇದರಲ್ಲಿ ಹಲವಾರು ವ್ಯಕ್ತಿಗಳು ಸಂಘ-ಸಂಸ್ಥೆಗಳು ರಾಜಕೀಯ ವ್ಯಕ್ತಿಗಳು ಮುಖ್ಯವಾಗಿ ಮಹಿಳೆಯರು ಮತ್ತು ಹಿರಿಯ ನಾಗರಿಕರು ಭಾಗವಹಿಸುತ್ತಾರೆ. ವಿದ್ಯಾರ್ಥಿಗಳು ಕೂಡ ಭಾಗವಹಿಸುವ ಸಾಧ್ಯತೆ ಇರುತ್ತದೆ ಪೊಲೀಸರು ನಿಮ್ಮ ನಿಮ್ಮ ಹಿರಿಯ ಅಧಿಕಾರಿಗಳು ನೀಡಿದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾರು ಕೂಡ ಅನುಚಿತವಾಗಿ ವರ್ತನೆ ಮಾಡುವುದು ಸಯಮ ಕಳೆದುಕೊಳ್ಳುವುದು ಮಾಡಬಾರದು ಎಂದು ಹೇಳಿದರು.
ಟೋಲ್ ತೆರವಾದರೆ ಎಲ್ಲ ಸಾರ್ವಜನಿಕರಿಗೂ ಅನುಕೂಲವಾಗುತ್ತದೆ ತಾವು ಕೂಡ ಅದೇ ಟೋಲ್ ನಲ್ಲಿ ನಿಮ್ಮ ಕುಟುಂಬದವರು ಓಡಾಟ ಮಾಡುತ್ತೀರಿ. ಟೋಲ್ ಮುಚ್ಚುವ ಕುರಿತು ಜಿಲ್ಲಾಧಿಕಾರಿಗಳು ನಿರ್ಣಯ ತೆಗೆದುಕೊಳ್ಳುತ್ತಾರೆ ಯಾರು ಶಾಂತಿ ಕದಡದಂತೆ ಪ್ರತಿಭಟನಾಕಾರದಲ್ಲಿ ಮನವಿ ಮಾಡಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಂಯಮ ಕಳೆದುಕೊಳ್ಳದಂತೆ ನಾನು ವಿನಂತಿಸುತ್ತೇನೆ ಯಾರೇ ಆದರೂ ಅನುಚಿತವಾಗಿ ವರ್ತಿಸಿದರೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ನಾನು ಕೂಡ ಸ್ಥಳದಲ್ಲಿ ಇದ್ದು ಇತರ ಹಿರಿಯ ಅಧಿಕಾರಿಗಳು ಇರುತ್ತಾರೆ ಎಂದರು .
ಮಂಗಳೂರು: ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ : ಸಿಐಡಿ ತನಿಖೆಗೆ ಸರ್ಕಾರ ಆದೇಶ – Vishwanews24
ಪ್ರತಿಭಟನೆಯಲ್ಲಿ ಹಿರಿಯ ನಾಗರಿಕರು ಮಹಿಳೆಯರು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ ಈ ಸಂದರ್ಭದಲ್ಲಿ ಪೊಲೀಸರು ಏನಾದರೂ ಅನುಚಿತವಾಗಿ ವರ್ತಿಸಿದರೆ ಅದು ಬೇರೆದೇ ರೂಪ ಪಡೆಯುವ ಸಾಧ್ಯತೆ ಇದೆ ಆದ್ದರಿಂದ ಎಲ್ಲರೂ ಎಚ್ಚರಿಕೆಯಿಂದ ವರ್ತಿಸಿ ಯಾರು ಕೂಡ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ ಸೂಚನೆ ನೀಡಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…