ಸುರತ್ಕಲ್: ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಎಚ್ಚರಿಕೆ ನೀಡಿದ್ದಾರೆ.
ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯು ಸುರತ್ಕಲ್ ಟೋಲ್ ರದ್ದು ಮಾಡಲು ಆಗ್ರಹಿಸಿ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಚಿವ ನಿತಿನ್ ಗಡ್ಕರಿ ಅವರು ಮತ್ತೆ 15 ದಿನಗಳ ಒಳಗೆ ರದ್ದು ಮಾಡುವ ಮಾತುಗಳನ್ನಾಡಿದ್ದಾರೆ.
ಅವರಿಗೆ ಒಂದು ಅವಕಾಶ ನೀಡಲಿದ್ದೇವೆ. ಬಳಿಕವೂ ಮಾತು ತಪ್ಪಿದಲ್ಲಿ ಜೈಲ್ ಭರೋ ಹೋರಾಟ ಮಾಡುತ್ತೇವೆ. ಇಂದಿನ ರಾಜಕಾರಣದಲ್ಲಿ ಕೊಡುವ ಮಾತಿಗೆ ಬೆಲೆ ಇಲ್ಲದಂತಾಗಿ, ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ನ್ಯಾಯ ,ನೀತಿ ಧರ್ಮದಲ್ಲಿ ರಾಜಕಾರಣ ನಡೆಯುತ್ತಿಲ್ಲ ಎಂದು ವಿಷಾದಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ಯಾವುದೇ ಸೌಲಭ್ಯವಿಲ್ಲದ ಈ ಟೋಲ್ ಅನಧಿಕೃತ ಎಂದು ಸ್ವತಃ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೂ ತೆರವಿಗೆ ವಿಳಂಬ ಯಾಕೆ? ಟೋಲ್ ನಲ್ಲಿಯೂ ಸಂಸದರು, ಶಾಸಕರಿಗೆ ಶೇ 40% ಕಮಿಷನ್ ಹೋಗುತ್ತಿರಬೇಕು. ಅದಕ್ಕೆ ಇದನ್ನು ಮುಚ್ಚುವ ಕೆಲಸ ಮಾಡುತ್ತಿಲ್ಲ.ಕೇಂದ್ರದ ಸಚಿವರು ಹೇಳಿದಂತೆ ಈ ಟೋಲ್ ತೆಗೆಯದಿದ್ದಲ್ಲಿ ನಾವೇ ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿ ಅರಬ್ಬಿ ಸಮುದ್ರಕ್ಕೆ ಎಸೆಯಲು ಸಿದ್ದರಿದ್ದೇವೆ. ಜನರಿಗಾಗಿ ಜೈಲು ಸೇರಲು ಹಿಂದೇಟು ಹಾಕುವುದಿಲ್ಲ ಎಂದು ನುಡಿದರು.
ಮೊಯಿದೀನ್ ಬಾವಾ, ವಿನಯ್ ಕುಮಾರ್ ಸೊರಕೆ, ಎಂ.ಜಿ ಹೆಗಡೆ,ವೈ ವೈ ರಾಘವೇಂದ್ರ ರಾವ್,ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಪುರುಷೋತ್ತಮ್ ಚಿತ್ರಾಪುರ, ಶಾಲೆಟ್ ಪಿಂಟೋ,ಪಿ.ವಿ ಮೋಹನ್,ಶಶಿಧರ್ ಹೆಗ್ಡೆ ಸಹಿತ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…