ಸುರತ್ಕಲ್: ಟೋಲ್ ರದ್ದಾಗದಿದ್ದರೆ ಜೈಲ್ ಭರೋ ಹೋರಾಟ ಮಾಡಲಾಗುವುದು ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಎಚ್ಚರಿಕೆ ನೀಡಿದ್ದಾರೆ.
ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯು ಸುರತ್ಕಲ್ ಟೋಲ್ ರದ್ದು ಮಾಡಲು ಆಗ್ರಹಿಸಿ ನಡೆಸುತ್ತಿರುವ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಚಿವ ನಿತಿನ್ ಗಡ್ಕರಿ ಅವರು ಮತ್ತೆ 15 ದಿನಗಳ ಒಳಗೆ ರದ್ದು ಮಾಡುವ ಮಾತುಗಳನ್ನಾಡಿದ್ದಾರೆ.
ಅವರಿಗೆ ಒಂದು ಅವಕಾಶ ನೀಡಲಿದ್ದೇವೆ. ಬಳಿಕವೂ ಮಾತು ತಪ್ಪಿದಲ್ಲಿ ಜೈಲ್ ಭರೋ ಹೋರಾಟ ಮಾಡುತ್ತೇವೆ. ಇಂದಿನ ರಾಜಕಾರಣದಲ್ಲಿ ಕೊಡುವ ಮಾತಿಗೆ ಬೆಲೆ ಇಲ್ಲದಂತಾಗಿ, ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ನ್ಯಾಯ ,ನೀತಿ ಧರ್ಮದಲ್ಲಿ ರಾಜಕಾರಣ ನಡೆಯುತ್ತಿಲ್ಲ ಎಂದು ವಿಷಾದಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ಯಾವುದೇ ಸೌಲಭ್ಯವಿಲ್ಲದ ಈ ಟೋಲ್ ಅನಧಿಕೃತ ಎಂದು ಸ್ವತಃ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೂ ತೆರವಿಗೆ ವಿಳಂಬ ಯಾಕೆ? ಟೋಲ್ ನಲ್ಲಿಯೂ ಸಂಸದರು, ಶಾಸಕರಿಗೆ ಶೇ 40% ಕಮಿಷನ್ ಹೋಗುತ್ತಿರಬೇಕು. ಅದಕ್ಕೆ ಇದನ್ನು ಮುಚ್ಚುವ ಕೆಲಸ ಮಾಡುತ್ತಿಲ್ಲ.ಕೇಂದ್ರದ ಸಚಿವರು ಹೇಳಿದಂತೆ ಈ ಟೋಲ್ ತೆಗೆಯದಿದ್ದಲ್ಲಿ ನಾವೇ ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಿ ಅರಬ್ಬಿ ಸಮುದ್ರಕ್ಕೆ ಎಸೆಯಲು ಸಿದ್ದರಿದ್ದೇವೆ. ಜನರಿಗಾಗಿ ಜೈಲು ಸೇರಲು ಹಿಂದೇಟು ಹಾಕುವುದಿಲ್ಲ ಎಂದು ನುಡಿದರು.
ಮೊಯಿದೀನ್ ಬಾವಾ, ವಿನಯ್ ಕುಮಾರ್ ಸೊರಕೆ, ಎಂ.ಜಿ ಹೆಗಡೆ,ವೈ ವೈ ರಾಘವೇಂದ್ರ ರಾವ್,ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಪುರುಷೋತ್ತಮ್ ಚಿತ್ರಾಪುರ, ಶಾಲೆಟ್ ಪಿಂಟೋ,ಪಿ.ವಿ ಮೋಹನ್,ಶಶಿಧರ್ ಹೆಗ್ಡೆ ಸಹಿತ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…