Featured

ಸುರತ್ಕಲ್: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು – Vishwanews24

ಸುರತ್ಕಲ್: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ಸುರತ್ಕಲ್: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ಕಡಿದು ಬಿದಿದ್ದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನು ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಸಮೀಪದಲ್ಲಿಯೇ ನಾರಾಯಣ ಮೂಲ್ಯ ಎಂಬವರ ಮನೆಯ ಮೇಲೆ ಬೃಹತ್ ಮರದ ಕೊಂಬೆಯೊಂದು ಬಿದ್ದು ಹಾನಿ ಸಂಭವಿಸಿದೆ. ವಿದ್ಯುತ್ ತಂತಿಗಳ ಮೇಲೆ ಮರದ ಗೆಲ್ಲು ಒಂದು ಭಾಗ ಸಿಲುಕಿಕೊಂಡ ಪರಿಣಾಮ ಭಾರಿ ಜೀವ ಹಾನಿ ತಪ್ಪಿದೆ.

ಸುಂಟರಗಾಳಿಗೆ ವಿವಿಧಡೆ ಮನೆಯ ಛಾವಣಿ ಶೀಟುಗಳು ಹಾರಿ ಹೋಗಿ ಹಾನಿ ಉಂಟಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸುವ ಕಾರ್ಯಕದಲ್ಲಿ ತೊಡಗಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago