Featured

ಸುರತ್ಕಲ್: ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರ ಕಳ್ಳತನ ಪ್ರಕರಣ ; ಇಬ್ಬರ ಬಂಧನ – vishwanews24

ಸುರತ್ಕಲ್: ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರ ಕಳ್ಳತನ ಪ್ರಕರಣ ; ಇಬ್ಬರ ಬಂಧನ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಳಾಯಿ ಗ್ರಾಮದ ಯಶೋದ ಕ್ಲಿನಿಕ್ ಸಮೀಪದ ನಿವಾಸಿ ಶ್ರೀಮತಿ ಅಮಿತಾ (43), ಗಂಡ ಸುರೇಶ್, ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಅವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಪೂಜಾ ಪರಿಕರಗಳನ್ನು ಇಟ್ಟುಕೊಂಡಿದ್ದು, ಮನೆಯಲ್ಲಿ ಯಾರೂ ವಾಸವಿಲ್ಲದೆ ನಿಯಮಿತವಾಗಿ ಪೂಜೆ ಮಾಡಿ ಬೀಗ ಹಾಕಲಾಗುತ್ತಿತ್ತು. ದಿನಾಂಕ 26-12-2025ರ ರಾತ್ರಿ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗದು ಒಳಪ್ರವೇಶಿಸಿ ಸುಮಾರು ರೂ.1 ಲಕ್ಷ ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ, ಮಂತ್ರದೇವತೆಯ ಬೆಳ್ಳಿಯ ಮೂರ್ತಿ, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, ಬೆಳ್ಳಿಯ ಕಡ್ಸಲೆ (ಖಡ್ಗ), ತಾಮ್ರದ ಘಂಟೆಗಳು, ತಾಮ್ರದ ಚೆಂಬುಗಳು ಹಾಗೂ ಎಲ್‌ಇಡಿ ಟಿವಿಯನ್ನು ಕಳವು ಮಾಡಿದ್ದರು.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 170/2025 ಕಲಂ 331(4), 305(ಎ) ಬಿ.ಎನ್.ಎಸ್ ಅಡಿ ದಿನಾಂಕ 27-12-2025ರಂದು ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ವೇಳೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ವಾಜೀದ್ ಜೆ @ ವಾಜಿ (27), ತಂದೆ ಜಾಫರ್ ಖಾನ್, ಬಜಪೆ ಮೂಲದವರನ್ನು ಪೊಲೀಸರು ಬಂಧಿಸಿದರು.

ವಿಚಾರಣೆಯಲ್ಲಿ ಆರೋಪಿ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡು, ಕಳವು ಮಾಡಿದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆ ದಿನಾಂಕ 27-01-2026ರಂದು ಸಯ್ಯದ್ ಆಲಿ (40), ತಂದೆ ಕೆ. ವೀರನ್ ಕುಟ್ಟಿ ಅವರನ್ನು ಕೂಡ ಬಂಧಿಸಲಾಗಿದೆ

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

15 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

15 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

15 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago