ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರಗಳ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಳಾಯಿ ಗ್ರಾಮದ ಯಶೋದ ಕ್ಲಿನಿಕ್ ಸಮೀಪದ ನಿವಾಸಿ ಶ್ರೀಮತಿ ಅಮಿತಾ (43), ಗಂಡ ಸುರೇಶ್, ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಅವರ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಪೂಜಾ ಪರಿಕರಗಳನ್ನು ಇಟ್ಟುಕೊಂಡಿದ್ದು, ಮನೆಯಲ್ಲಿ ಯಾರೂ ವಾಸವಿಲ್ಲದೆ ನಿಯಮಿತವಾಗಿ ಪೂಜೆ ಮಾಡಿ ಬೀಗ ಹಾಕಲಾಗುತ್ತಿತ್ತು. ದಿನಾಂಕ 26-12-2025ರ ರಾತ್ರಿ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗದು ಒಳಪ್ರವೇಶಿಸಿ ಸುಮಾರು ರೂ.1 ಲಕ್ಷ ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ, ಮಂತ್ರದೇವತೆಯ ಬೆಳ್ಳಿಯ ಮೂರ್ತಿ, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, ಬೆಳ್ಳಿಯ ಕಡ್ಸಲೆ (ಖಡ್ಗ), ತಾಮ್ರದ ಘಂಟೆಗಳು, ತಾಮ್ರದ ಚೆಂಬುಗಳು ಹಾಗೂ ಎಲ್ಇಡಿ ಟಿವಿಯನ್ನು ಕಳವು ಮಾಡಿದ್ದರು.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 170/2025 ಕಲಂ 331(4), 305(ಎ) ಬಿ.ಎನ್.ಎಸ್ ಅಡಿ ದಿನಾಂಕ 27-12-2025ರಂದು ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ವೇಳೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ವಾಜೀದ್ ಜೆ @ ವಾಜಿ (27), ತಂದೆ ಜಾಫರ್ ಖಾನ್, ಬಜಪೆ ಮೂಲದವರನ್ನು ಪೊಲೀಸರು ಬಂಧಿಸಿದರು.
ವಿಚಾರಣೆಯಲ್ಲಿ ಆರೋಪಿ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡು, ಕಳವು ಮಾಡಿದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬವರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಹಿನ್ನೆಲೆ ದಿನಾಂಕ 27-01-2026ರಂದು ಸಯ್ಯದ್ ಆಲಿ (40), ತಂದೆ ಕೆ. ವೀರನ್ ಕುಟ್ಟಿ ಅವರನ್ನು ಕೂಡ ಬಂಧಿಸಲಾಗಿದೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…