ಸುರತ್ಕಲ್: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಬಾಲಕ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ರವಿವಾರ ರಾತ್ರಿ ನಡೆದಿದೆ.
ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ(61) ಮೃತಪಟ್ಟವರು. ಮೂಲತಃ ಉತ್ತರ ಕರ್ನಾಟದ ಸದ್ಯ ಚೇಳಾಯರಿನಲ್ಲಿ ವಾಸವಿರುವ ಹನುಮಂತ ಎಂಬವರ ಪುತ್ರ ವಿಶ್ವನಾಥ (16) ಗಾಯಗೊಂಡ ಬಾಲಕ. ಆತನನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣವಾಗಿರುವ ಕಾರಿನ ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬವರನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕರುಣಾಕರ ಶೆಟ್ಟಿ ಮುಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ ಅಂಗಡಿ ಮುಚ್ಚಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟವರು ಹಾಲು ಖರೀದಿಗೆ ಬಂದಿದ್ದ ನೆರೆ ಮನೆಯ ವಿಶ್ವಾನಾಥ ರನ್ನು ಕುಳ್ಳಿರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66ನ್ನು ದಾಟುತ್ತಿದ್ದ ವೇಳೆ ಹಳೆಯಂಗಡಿ ಕಡೆಯಿಂದ ಸುರತ್ಕಲ್ ತನ್ನ ತೆರಳುತ್ತಿದ್ದ ಕಾರು ಢಿಕ್ಕಿಹೊಡೆದಿದೆಯೆನ್ನಲಾಗಿದೆ.
ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ಕರುಣಾಕರ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಸಹಸವಾರರಾಗಿದ್ದ ವಿಶ್ವನಾಥರಿಗೆ ಕೈಕಾಲಿಗೆ ಗಂಭೀರ ಗಾಯಗಳಾಗಿದ್ದು, ಮುಕ್ಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…