ಸುರತ್ಕಲ್:ನಿನ್ನೆಯಿಂದ ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಅಣೆಕಟ್ಟಿನ ರೈಲ್ವೆ ಸೇತುವೆ ಕೆಳಭಾಗದ ನದಿಯಲ್ಲಿ ಪತ್ತೆ ದಾರುಣ ಘಟನೆ ನಡೆದಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ್ ಅವರ ಪುತ್ರ ರಾಘವೇಂದ್ರ(15), ವಿಶ್ವನಾಥ್ ಅವರ ಪುತ್ರ ನಿರೂಪ(15), ದೇವದಾಸ್ ಅವರ ಮಗ ಅನ್ವಿತ್(15) ಎಂದು ಗುರುತಿಸಲಾಗಿದೆ.
ಈ ವಿದ್ಯಾರ್ಥಿಗಳು ಖಾಸಗಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದ ಬಳಿಕ 1:30ರ ನಂತರ ನಾಪತ್ತೆಯಾಗಿದ್ದರು.
ನಾಪತ್ತೆ ಪ್ರ ಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕ ಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ
ಸಿಸಿಟಿವಿ ದೃಶ್ಯಾ ವಳಿಗಳನ್ನು ತರಿಸಿಕೊಂಡಿದ್ದರು. ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಹಚ್ಚಿದ್ದರು. ಜೊತೆಗೆ ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದನ್ನು ಖಚಿತ ಪಡಿಸಿಕೊಂಡು ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ನಗರದ ವೆನ್ ಲಾಕ್ ಆಸ್ಪತ್ರೆ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…