ಸುರತ್ಕಲ್: ಒಂದು ವರ್ಷದಿಂದ ಪಾಳು ಬಿದ್ದಿರುವ, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ, ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ ಗಳನ್ನು ಹೆದ್ದಾರಿ ಪ್ರಾಧಿಕಾರ ಇಂದು ತೆರವುಗೊಳಿಸಿದೆ ಎಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಡಿ.1ರಂದು ಸುರತ್ಕಲ್ ಟೋಲ್ ಸಂಗ್ರಹ ರದ್ದು ಗೊಂಡು ಹೋರಾಟ ಗೆಲುವು ಸಾಧಿಸಿದ ದಿನವಾಗಿದ್ದು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಗೆಲುವಿನ ಸಂಭ್ರಮಾಚರಣೆ ಹಾಗೂ ಅದೇ ಸಂದರ್ಭ ನಿರುಪಯುಕ್ತ ಟೋಲ್ ಗೇಟ್ ರಚನೆ ತೆರವು, ನಂತೂರು- ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯನ್ನಾಗಿಸುವುದು ಸಹಿತ ಹೆದ್ದಾರಿಯ ಹಲವು ಸಮಸ್ಯೆ ಗಳ ಪರಿಹಾರಕ್ಕಾಗಿ ಆಗ್ರಹ ಸಭೆ ಆಯೋಜಿಸಿದೆ. ಇದಕ್ಕೆ ದೊಡ್ಡ ಪ್ರಮಾಣದ ಜನ ಬೆಂಬಲ ದೊರೆತಿದೆ. ಹೋರಾಟ ಸಮಿತಿಯೂ ಕಾರ್ಯಕ್ರಮದ ಯಶಸ್ಸಿಗೆ ವ್ಯಾಪಕ ಸಿದ್ಧತೆ ನಡೆಸುತ್ತಿದೆ.
ಸಂಭ್ರಮಾಚರಣೆಯ ಮುನ್ನಾ ದಿನ ನಿರುಪಯುಕ್ತ ಟೋಲ್ ಗೇಟ್ ಪಾಳು ಬಿದ್ದ ಬೂತ್ ಗಳನ್ನು ತೆರವುಗೊಳಿಸಿ ರುವುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೆ ಹೋರಾಟ ಭುಗಿಲೇಳುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈ ಅಲ್ಪ ಪ್ರಮಾಣದ ತೆರವು ಪ್ರಕ್ರಿಯೆ ನಡೆದಿದೆ ಎಂದು ಮುನೀರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…