ಸುರತ್ಕಲ್: ಒಂದು ವರ್ಷದಿಂದ ಪಾಳು ಬಿದ್ದಿರುವ, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ, ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ ಗಳನ್ನು ಹೆದ್ದಾರಿ ಪ್ರಾಧಿಕಾರ ಇಂದು ತೆರವುಗೊಳಿಸಿದೆ ಎಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಡಿ.1ರಂದು ಸುರತ್ಕಲ್ ಟೋಲ್ ಸಂಗ್ರಹ ರದ್ದು ಗೊಂಡು ಹೋರಾಟ ಗೆಲುವು ಸಾಧಿಸಿದ ದಿನವಾಗಿದ್ದು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಗೆಲುವಿನ ಸಂಭ್ರಮಾಚರಣೆ ಹಾಗೂ ಅದೇ ಸಂದರ್ಭ ನಿರುಪಯುಕ್ತ ಟೋಲ್ ಗೇಟ್ ರಚನೆ ತೆರವು, ನಂತೂರು- ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯನ್ನಾಗಿಸುವುದು ಸಹಿತ ಹೆದ್ದಾರಿಯ ಹಲವು ಸಮಸ್ಯೆ ಗಳ ಪರಿಹಾರಕ್ಕಾಗಿ ಆಗ್ರಹ ಸಭೆ ಆಯೋಜಿಸಿದೆ. ಇದಕ್ಕೆ ದೊಡ್ಡ ಪ್ರಮಾಣದ ಜನ ಬೆಂಬಲ ದೊರೆತಿದೆ. ಹೋರಾಟ ಸಮಿತಿಯೂ ಕಾರ್ಯಕ್ರಮದ ಯಶಸ್ಸಿಗೆ ವ್ಯಾಪಕ ಸಿದ್ಧತೆ ನಡೆಸುತ್ತಿದೆ.
ಸಂಭ್ರಮಾಚರಣೆಯ ಮುನ್ನಾ ದಿನ ನಿರುಪಯುಕ್ತ ಟೋಲ್ ಗೇಟ್ ಪಾಳು ಬಿದ್ದ ಬೂತ್ ಗಳನ್ನು ತೆರವುಗೊಳಿಸಿ ರುವುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೆ ಹೋರಾಟ ಭುಗಿಲೇಳುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈ ಅಲ್ಪ ಪ್ರಮಾಣದ ತೆರವು ಪ್ರಕ್ರಿಯೆ ನಡೆದಿದೆ ಎಂದು ಮುನೀರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…