ಸುರತ್ಕಲ್: ಒಂದು ವರ್ಷದಿಂದ ಪಾಳು ಬಿದ್ದಿರುವ, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ, ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್ ನ ಕೆಲವು ಟೋಲ್ ಸಂಗ್ರಹ ಬೂತ್ ಗಳನ್ನು ಹೆದ್ದಾರಿ ಪ್ರಾಧಿಕಾರ ಇಂದು ತೆರವುಗೊಳಿಸಿದೆ ಎಂದು ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಡಿ.1ರಂದು ಸುರತ್ಕಲ್ ಟೋಲ್ ಸಂಗ್ರಹ ರದ್ದು ಗೊಂಡು ಹೋರಾಟ ಗೆಲುವು ಸಾಧಿಸಿದ ದಿನವಾಗಿದ್ದು, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಗೆಲುವಿನ ಸಂಭ್ರಮಾಚರಣೆ ಹಾಗೂ ಅದೇ ಸಂದರ್ಭ ನಿರುಪಯುಕ್ತ ಟೋಲ್ ಗೇಟ್ ರಚನೆ ತೆರವು, ನಂತೂರು- ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯನ್ನಾಗಿಸುವುದು ಸಹಿತ ಹೆದ್ದಾರಿಯ ಹಲವು ಸಮಸ್ಯೆ ಗಳ ಪರಿಹಾರಕ್ಕಾಗಿ ಆಗ್ರಹ ಸಭೆ ಆಯೋಜಿಸಿದೆ. ಇದಕ್ಕೆ ದೊಡ್ಡ ಪ್ರಮಾಣದ ಜನ ಬೆಂಬಲ ದೊರೆತಿದೆ. ಹೋರಾಟ ಸಮಿತಿಯೂ ಕಾರ್ಯಕ್ರಮದ ಯಶಸ್ಸಿಗೆ ವ್ಯಾಪಕ ಸಿದ್ಧತೆ ನಡೆಸುತ್ತಿದೆ.
ಸಂಭ್ರಮಾಚರಣೆಯ ಮುನ್ನಾ ದಿನ ನಿರುಪಯುಕ್ತ ಟೋಲ್ ಗೇಟ್ ಪಾಳು ಬಿದ್ದ ಬೂತ್ ಗಳನ್ನು ತೆರವುಗೊಳಿಸಿ ರುವುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೆ ಹೋರಾಟ ಭುಗಿಲೇಳುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈ ಅಲ್ಪ ಪ್ರಮಾಣದ ತೆರವು ಪ್ರಕ್ರಿಯೆ ನಡೆದಿದೆ ಎಂದು ಮುನೀರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…