Featured

ಸುರತ್ಕಲ್:  ನೂತನ ಕುಮಾರಿ ಅವರಿಗೆ ಉದ್ಯೋಗದ ಆದೇಶ ಪುನರ್ ಹೊರಡಿಸಬೇಕು : ಭರತ್ ಶೆಟ್ಟಿ – Vishwanews24

ಸುರತ್ಕಲ್:  ನೂತನ ಕುಮಾರಿ ಅವರಿಗೆ ಉದ್ಯೋಗದ ಆದೇಶ ಪುನರ್ ಹೊರಡಿಸಬೇಕು : ಭರತ್ ಶೆಟ್ಟಿ

ಸುರತ್ಕಲ್: ರಾಜ್ಯದಲ್ಲಿ ದ್ವೇಷ ರಾಜಕಾರಣಕ್ಕೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರ ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾಗಿರುವ ಪ್ರವೀಣ ನೆಟ್ಟಾರು ಅವರ ಪತ್ನಿಗೆ ಮಾನವೀಯ ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿರುವ ಕೆಲಸವನ್ನ ಕೂಡ ಕಸಿದುಕೊಂಡಿದ್ದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಮುಖ್ಯಮಂತ್ರಿಗಳು ಮಾನವೀಯ ನೆಲೆಯಲ್ಲಿ ನೂತನ ಕುಮಾರಿ ಅವರಿಗೆ ಉದ್ಯೋಗದ ಆದೇಶ ಪುನರ್ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ಕಾರ್ಯಕರ್ತರು ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು ಹಲವಾರು ಕಡೆ ಹಲ್ಲೆ ನಡೆದ ಪ್ರಕರಣ ನಡೆದಿದೆ.

ಮಾಜಿ ಸಚಿವರಾದ ಡಾ. ಅಶ್ವತ್ಥ ನಾರಾಯಣ್ ಅವರ ಮೇಲೆಯೂ ಕೂಡ ದುರುದ್ದೇಶಪೂರಿತವಾಗಿ ಕೇಸು ದಾಖಲಿಸಿದೆ.

ಒಂದಡೆ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನು ಜನರಿಗೆ ಕೊಡಲು ಒದ್ದಾಡುತ್ತಿರುವ ಸರ್ಕಾರ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಸಲುವಾಗಿ ಬಿಜೆಪಿಯ ವಿರುದ್ಧ ಹಗೆಯನ್ನ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ ಆಕ್ರೋಶ ವ್ಯಕ್ತಪಡಿಸಿರುವ ಅವರು ಆರ್ ಎಸ್ ಎಸ್, ಬಜರಂಗದಳ ಸಹಿತ ಹಿಂದೂ ಪರ ಕೆಲಸ ಮಾಡುವ ಸಂಘಟನೆಗಳನ್ನು ಗುರಿಯಾಗಿಸಿ ಯಾವುದೇ ಕ್ರಮ ಕೈಗೊಂಡರೂ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಉಂಟಾದರೆ ರಾಜ್ಯ ಸರಕಾರದ ಹೊಣೆಗೇಡಿತನದ ನಿರ್ಧಾರ ಕಾರಣವಾಗಲಿದೆ ಎಂದು ಎಚ್ಚರಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

8 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

8 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

9 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

9 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

10 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

11 hours ago