ಮಂಗಳೂರು : ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂಬಾತನನ್ನು ಬಂಧನ ಮಾಡಲಾಗಿದ್ದು, ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ಆರೋಪಿಗಳನ್ನು ಕರೆದುಕೊಂಡು ಹೋಗಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ. 28ರಂದು ರಾತ್ರಿ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ನನ್ನು ದುಷ್ಕರ್ಮಿಗಳು ತಲ್ವಾರ್ ಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು.
ಪ್ರಕರಣ ಸಂಬಂಧ ಈಗಾಗಲೇ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ 6 ಮಂದಿ ಹಾಗು ಕೃತ್ಯ ನಡೆಸಲು ಕಾರು ನೀಡಿದ್ದ ಓರ್ವ ಸೇರಿ ಹಾಗೂ ಆಶ್ರಯ ನೀಡಿದ್ದ ಇನ್ನೋರ್ವ ಸೇರಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…