Featured

ಸುರತ್ಕಲ್ : ಫಾಝಿಲ್ ಹತ್ಯೆಯ ಸಮಯದಲ್ಲಿ ಮುಖ್ಯಮಂತ್ರಿ ಮಂಗಳೂರಿನಲ್ಲಿದ್ದರೂ ಪ್ರತಿಕ್ರಿಯೆ ನೀಡಿಲ್ಲ : ಸಿಎಂ ವಿರುದ್ಧ ಫಾಝಿಲ್ ಕುಟುಂಬ ಅಸಮಾಧಾನ – Vishwanews24 ಅಸಮಾಧಾನ

ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂತಾಪ ನೀಡುವ ಡಿಕೆಶಿ ಅಲ್ಪಸಂಖ್ಯಾತರಿಗೆ ತೊಂದರೆ, ನಷ್ಟಗಳಾದಾಗ ಯಾಕೆ  ಸ್ಪಂದಿಸುವುದಿಲ್ಲ..

ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಕುರಿತು ಡಿಕೆಶಿ ಅವರಿಗೆ ಇರುವ ನಿಲುವು ಸ್ಪಷ್ಟಪಡಿಸಬೇಕು..

ಕಾಂಗ್ರೆಸ್ ಮುಖಂಡರನ್ನು ತರಾಟೆ ತೆಗೆದುಕೊಂಡ ಫಾಝಿಲ್ ಕುಟುಂಬ

ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯೋ ಅಥವಾ ಬಿಜೆಪಿಯವರಿಗೆ ಮಾತ್ರ ಮುಖ್ಯಮಂತ್ರಿಯೋ..

ಸಿಎಂ ವಿರುದ್ಧ ಫಾಝಿಲ್ ಕುಟುಂಬ ಅಸಮಾಧಾನ

ಸುರತ್ಕಲ್: ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಕೊಲೆಯಾದ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್‌ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಫಾಝಿಲ್ ಅವರ ಸೋದರ ಸಂಬಂಧಿ ವಹೀದ್‌ ಅಹ್ಮದ್‌ ಮಾಗುಂಡಿ ಅವರು, ಮನೆಗೆ ಭೇಟಿ ನೀಡಿದ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ ವಹೀದ್‌ ಅಹ್ಮದ್‌ ಮಾಗುಂಡಿ ಅವರು, ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂತಾಪ ಸೂಚಿಸಿ ಹೇಳಿಕೆಗಳನ್ನು ನೀಡುವ ಅವರು ಅಲ್ಪಸಂಖ್ಯಾತರಿಗೆ ತೊಂದರೆ, ನಷ್ಟಗಳಾದಾಗ ಯಾಕೆ ಉನ್ನತ ಹುದ್ದೆಯಲ್ಲಿರುವ ಡಿಕೆಶಿ ಸ್ಪಂದಿಸುವುದಿಲ್ಲ. ಹೀಗಿರುವಾಗ ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಕುರಿತು ಅವರಿಗೆ ಇರುವ ನಿಲುವು ಸ್ಪಷ್ಟಪಡಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಫಾಝಿಲ್ ಕುಟುಂಬಸ್ಥರು, ಫಾಝಿಲ್‌ರ ಹತ್ಯೆ ರಾತ್ರಿ ಎಂಟು ಗಂಟೆ ವೇಳೆಗೆ ನಡೆದಿದ್ದು, ಆ ಸಮಯದಲ್ಲಿ ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದರು. ಆದರೂ ಅವರು ಘಟನೆಯ ಕುರಿತು ಹೇಳಿಕೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ : 2024ರ ಚುನಾವಣೆಯಲ್ಲೂ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ :ಅಮಿತ್ ಶಾ ಘೋಷಣೆ – Vishwanews24

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಪರಿಹಾರ ನೀಡಿರುವ ಮುಖ್ಯಮಂತ್ರಿ, ಅಲ್ಲೇ ಎರಡು ಕಿ.ಮೀ. ದೂರದಲ್ಲಿದ್ದ ಕೊಲೆಯಾದ ಮಸೂದ್ ನಿವಾಸಕ್ಕೆ ತೆರಳಿಲ್ಲ. ಅದೇ ದಿನ ಫಾಝಿಲ್ ಹತ್ಯೆಯ ಸಮಯದಲ್ಲಿ ಮಂಗಳೂರಿನಲ್ಲಿದ್ದರೂ ಪ್ರತಿಕ್ರಿಯೆ ನೀಡಿಲ್ಲ. ಅವರು ರಾಜ್ಯದ ಮುಖ್ಯಮಂತ್ರಿಯೋ ಅಥವಾ ಬಿಜೆಪಿಯವರಿಗೆ ಮಾತ್ರ ಮುಖ್ಯಮಂತ್ರಿಯೋ ಎಂದು ಕುಟುಂಬಿಕರು ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊಯ್ದಿನ್ ಬಾವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಶಿಧರ ಹೆಗಡೆ, ಕವಿತಾ ಸನಿಲ್, ಪ್ರತಿಭಾ ಕುಳಾಯಿ, ಮಂಗಳಪೇಟೆ ಮುಹಿಯುದ್ದೀನ್‌ ಜುಮಾ ಮಸೀದಿ ಅಧ್ಯಕ್ಷ ಎಂ.ಎ. ಹಸನಬ್ಬ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ನದಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ.. ಸರ್ಕಾರದ ನಿರ್ಧಾರಕ್ಕೆ ಉತ್ತರಾಖಂಡ ಹೈಕೋರ್ಟ್‌ ಸಹಮತ- Vishwanews24

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago