Featured

ಸುರತ್ಕಲ್ : ಫಾಝಿಲ್ ಹತ್ಯೆಯ ಸಮಯದಲ್ಲಿ ಮುಖ್ಯಮಂತ್ರಿ ಮಂಗಳೂರಿನಲ್ಲಿದ್ದರೂ ಪ್ರತಿಕ್ರಿಯೆ ನೀಡಿಲ್ಲ : ಸಿಎಂ ವಿರುದ್ಧ ಫಾಝಿಲ್ ಕುಟುಂಬ ಅಸಮಾಧಾನ – Vishwanews24 ಅಸಮಾಧಾನ

ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂತಾಪ ನೀಡುವ ಡಿಕೆಶಿ ಅಲ್ಪಸಂಖ್ಯಾತರಿಗೆ ತೊಂದರೆ, ನಷ್ಟಗಳಾದಾಗ ಯಾಕೆ  ಸ್ಪಂದಿಸುವುದಿಲ್ಲ..

ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಕುರಿತು ಡಿಕೆಶಿ ಅವರಿಗೆ ಇರುವ ನಿಲುವು ಸ್ಪಷ್ಟಪಡಿಸಬೇಕು..

ಕಾಂಗ್ರೆಸ್ ಮುಖಂಡರನ್ನು ತರಾಟೆ ತೆಗೆದುಕೊಂಡ ಫಾಝಿಲ್ ಕುಟುಂಬ

ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯೋ ಅಥವಾ ಬಿಜೆಪಿಯವರಿಗೆ ಮಾತ್ರ ಮುಖ್ಯಮಂತ್ರಿಯೋ..

ಸಿಎಂ ವಿರುದ್ಧ ಫಾಝಿಲ್ ಕುಟುಂಬ ಅಸಮಾಧಾನ

ಸುರತ್ಕಲ್: ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಕೊಲೆಯಾದ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್‌ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಫಾಝಿಲ್ ಅವರ ಸೋದರ ಸಂಬಂಧಿ ವಹೀದ್‌ ಅಹ್ಮದ್‌ ಮಾಗುಂಡಿ ಅವರು, ಮನೆಗೆ ಭೇಟಿ ನೀಡಿದ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು. ಇದೇ ವೇಳೆ ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ ವಹೀದ್‌ ಅಹ್ಮದ್‌ ಮಾಗುಂಡಿ ಅವರು, ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂತಾಪ ಸೂಚಿಸಿ ಹೇಳಿಕೆಗಳನ್ನು ನೀಡುವ ಅವರು ಅಲ್ಪಸಂಖ್ಯಾತರಿಗೆ ತೊಂದರೆ, ನಷ್ಟಗಳಾದಾಗ ಯಾಕೆ ಉನ್ನತ ಹುದ್ದೆಯಲ್ಲಿರುವ ಡಿಕೆಶಿ ಸ್ಪಂದಿಸುವುದಿಲ್ಲ. ಹೀಗಿರುವಾಗ ರಾಜ್ಯದಲ್ಲಿರುವ ಅಲ್ಪಸಂಖ್ಯಾತರ ಕುರಿತು ಅವರಿಗೆ ಇರುವ ನಿಲುವು ಸ್ಪಷ್ಟಪಡಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಫಾಝಿಲ್ ಕುಟುಂಬಸ್ಥರು, ಫಾಝಿಲ್‌ರ ಹತ್ಯೆ ರಾತ್ರಿ ಎಂಟು ಗಂಟೆ ವೇಳೆಗೆ ನಡೆದಿದ್ದು, ಆ ಸಮಯದಲ್ಲಿ ಮುಖ್ಯಮಂತ್ರಿ ಮಂಗಳೂರಿನಲ್ಲಿ ಇದ್ದರು. ಆದರೂ ಅವರು ಘಟನೆಯ ಕುರಿತು ಹೇಳಿಕೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ : 2024ರ ಚುನಾವಣೆಯಲ್ಲೂ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ :ಅಮಿತ್ ಶಾ ಘೋಷಣೆ – Vishwanews24

ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಪರಿಹಾರ ನೀಡಿರುವ ಮುಖ್ಯಮಂತ್ರಿ, ಅಲ್ಲೇ ಎರಡು ಕಿ.ಮೀ. ದೂರದಲ್ಲಿದ್ದ ಕೊಲೆಯಾದ ಮಸೂದ್ ನಿವಾಸಕ್ಕೆ ತೆರಳಿಲ್ಲ. ಅದೇ ದಿನ ಫಾಝಿಲ್ ಹತ್ಯೆಯ ಸಮಯದಲ್ಲಿ ಮಂಗಳೂರಿನಲ್ಲಿದ್ದರೂ ಪ್ರತಿಕ್ರಿಯೆ ನೀಡಿಲ್ಲ. ಅವರು ರಾಜ್ಯದ ಮುಖ್ಯಮಂತ್ರಿಯೋ ಅಥವಾ ಬಿಜೆಪಿಯವರಿಗೆ ಮಾತ್ರ ಮುಖ್ಯಮಂತ್ರಿಯೋ ಎಂದು ಕುಟುಂಬಿಕರು ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಎಂಎಲ್ಸಿ ಮಂಜುನಾಥ ಭಂಡಾರಿ, ಮಾಜಿ ಶಾಸಕ ಮೊಯ್ದಿನ್ ಬಾವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಶಶಿಧರ ಹೆಗಡೆ, ಕವಿತಾ ಸನಿಲ್, ಪ್ರತಿಭಾ ಕುಳಾಯಿ, ಮಂಗಳಪೇಟೆ ಮುಹಿಯುದ್ದೀನ್‌ ಜುಮಾ ಮಸೀದಿ ಅಧ್ಯಕ್ಷ ಎಂ.ಎ. ಹಸನಬ್ಬ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ನದಿ ತೀರದ 500 ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ.. ಸರ್ಕಾರದ ನಿರ್ಧಾರಕ್ಕೆ ಉತ್ತರಾಖಂಡ ಹೈಕೋರ್ಟ್‌ ಸಹಮತ- Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

7 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

7 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

7 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

7 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago