ಮಂಗಳೂರು: ಸುರತ್ಕಲ್ನಲ್ಲಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬೆಂಗಳೂರು, ಉತ್ತರ ಕನ್ನಡ ಸೇರಿದಂತೆ ವಿವಿಧ ಕಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರು ಹಂತಕರನ್ನು ಸೋಮವಾರ ರಾತ್ರಿ ಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇಂದು ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮತ್ತು ಆರೋಪಿಗಳ ಹೆಸರನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.
ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೌಡಿಶೀಟರ್ ಸುಹಾಸ್ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅದರಲ್ಲಿಯೂ ಮೂವರು ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಯುವಕರಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಫಾಝಿಲ್ ಹತ್ಯೆ ನಂತರ ಮಂಗಳೂರು ಸಿಟಿ ಹೊರವಲಯದ ಕಾರ್ಕಾಳದಲ್ಲಿ ಕಾರನ್ನು ಬಿಟ್ಟು ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳ ಜಾಡು ಬೆನ್ನು ಹತ್ತಿದ್ದ ಮಂಗಳೂರು ಪೊಲೀಸರಿಗೆ ಆರೋಪಿಗಳು ಇರುವ ಸ್ಥಳದ ಬಗ್ಗೆ ಮಾಹಿತಿ ದೊರೆತಿತ್ತು.
ಒಂದು ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ನಿಲ್ಲದ ಆರೋಪಿಗಳ ಜಾಡನ್ನು ಪತ್ತೆ ಹಚ್ಚಿದ ಪೊಲೀಸರು, ಸೋಮವಾರ ಸಂಜೆ 6:30ರ ಸರಿ ಸುಮಾರಿಗೆ ಆರೋಪಿಗಳಿದ್ದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆದರೆ ಅಲ್ಲಿಂದಲೂ ಆರೋಪಿಗಳು ಎಸ್ಕೇಪ್ ಆಗಿದ್ದರು. ಬಳಿಕ ಅವರಿಗಾಗಿ ಮತ್ತೆ ಹುಡುಕಾಟ ನಡೆಸಿದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತಂಡ, ಮಿಸ್ ಆಗಿದ್ದ ಸ್ಥಳದಿಂದ 15 ಕಿಲೋ ಮೀಟರ್ ದೂರದಲ್ಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಮೂವರು ಆರೋಪಿಗಳನ್ನು ಸುರತ್ಕಲ್ಗೆ ಕರೆ ತಂದಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…