ಸುರತ್ಕಲ್: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ದ್ವಿಚಕ್ರ ವಾಹನ ಬೆನ್ನಟ್ಟಿದ್ದ ಪೊಲೀಸ್ ಸಿಬ್ಬಂದಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಕುಳಾಯಿಯಲ್ಲಿ ಟ್ಯೂಶನ್ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದರೆನ್ನಲಾಗಿದೆ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.
ಇದನ್ನು ಗಮನಿಸಿದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…