Featured

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು  : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಹಾಗೂ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಾಲಕಿಯ ಕುರಿತ ಕೆಲವೊಂದು ವಿಚಾರಗಳು ಗೊತ್ತಿದ್ದರೂ ಹೆತ್ತವರು ಮೌನವಾಗಿದ್ದರಿಂದ ಗಂಭೀರ ಸ್ಥಿತಿಗೆ ತಲುಪುವಂತಾಯಿತು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಈ ಪ್ರಕರಣದ ಗಂಭೀರತೆಯನ್ನು ಪ್ರಸ್ತಾಪಿಸಿ ಅವರು ಮಾತನಾಡಿದರು.

“ಆತ್ಮಹತ್ಯೆ ಮಾಡಿಕೊಂಡ ಬಾಲಕಿಯು ಸ್ಥಳೀಯ ಮ್ಯೂಸಿಕ್ (ಸಂಗೀತ) ತಂಡವೊಂದರ ಸದಸ್ಯೆಯಾಗಿದ್ದಳು. ಆ ತಂಡದ ಕೆಲವು ಸದಸ್ಯರು ತೀವ್ರ ಮಾದಕ ದ್ರವ್ಯ ವ್ಯಸನಿಗಳಾಗಿದ್ದು, ಅವರ ಮೇಲೆ ಈ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕರಣಗಳು ದಾಖಲಾಗಿದ್ದವು. ಇದೇ ತಂಡದ ಸದಸ್ಯರು ಬಾಲಕಿಗೆ ದೈಹಿಕವಾಗಿ ತೀವ್ರ ಕಿರುಕುಳ ನೀಡಿದ್ದಾರೆ. ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು, ಮಾನಸಿಕ ನೊಂದ ಬೆನ್ನಲ್ಲೇ ಇದೀಗ ಆತ್ಮಹತ್ಯೆಯ ಹಾದಿ ಹಿಡಿದಿದ್ದಾಳೆ” ಎಂದು ಕಮಿಷನರ್ ತನಿಖೆಯ ವಿವರಗಳನ್ನು ಬಿಚ್ಚಿಟ್ಟರು.

ಪ್ರಕರಣದಲ್ಲಿ ಪೋಷಕರ ನಡೆ ಹಾಗೂ ನಿಗಾ ವಹಿಸದ ಧೋರಣೆಯ ಕುರಿತು ಕಮಿಷನರ್ ತೀವ್ರ ವಿಷಾದ ವ್ಯಕ್ತಪಡಿಸಿದರು. “ಬಾಲಕಿಯ ಕುರಿತ ಕೆಲವೊಂದು ಆತಂಕಕಾರಿ ವಿಚಾರಗಳು ಮೊದಲೇ ಗೊತ್ತಿದ್ದರೂ ಹೆತ್ತವರು ದೀರ್ಘಕಾಲ ಮೌನವಾಗಿದ್ದರಿಂದ ಪರಿಸ್ಥಿತಿ ಇಷ್ಟು ಗಂಭೀರ ಸ್ಥಿತಿಗೆ ತಲುಪುವಂತಾಯಿತು. ಬಾಲಕಿ ಮ್ಯೂಸಿಕ್ ತಂಡದ ನೆಪದಲ್ಲಿ ತಡರಾತ್ರಿ ಮನೆಗೆ ಬರುತ್ತಿದ್ದಾಗ ಹೆತ್ತವರು ಆಕೆಯನ್ನು ಪ್ರಶ್ನಿಸಬೇಕಾಗಿತ್ತು. ಕಳೆದ ಒಂದು ವರ್ಷದಿಂದಲೂ ಮೌನವಾಗಿದ್ದ ಹೆತ್ತವರು, ಈಗ ಘಟನೆ ನಡೆದ ಬಳಿಕ ಆರೋಪಿಗಳ ಪತ್ತೆಗೆ ಆಗ್ರಹಿಸುತ್ತಿದ್ದಾರೆ. ನಮ್ಮ ಇಲಾಖೆ ಖಂಡಿತವಾಗಿಯೂ ಆರೋಪಿಯನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತದೆ. ಆದರೆ, ಹೆತ್ತವರಿಗೂ ಮಕ್ಕಳ ನಡವಳಿಕೆಯ ಮೇಲೆ ಜವಾಬ್ದಾರಿ ಇರಬೇಕಾಗಿತ್ತು” ಎಂದು ಅವರು ಕಿವಿಮಾತು ಹೇಳಿದರು.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

11 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

30 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

39 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

45 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago