ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಹಾಗೂ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಾಲಕಿಯ ಕುರಿತ ಕೆಲವೊಂದು ವಿಚಾರಗಳು ಗೊತ್ತಿದ್ದರೂ ಹೆತ್ತವರು ಮೌನವಾಗಿದ್ದರಿಂದ ಗಂಭೀರ ಸ್ಥಿತಿಗೆ ತಲುಪುವಂತಾಯಿತು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಈ ಪ್ರಕರಣದ ಗಂಭೀರತೆಯನ್ನು ಪ್ರಸ್ತಾಪಿಸಿ ಅವರು ಮಾತನಾಡಿದರು.
“ಆತ್ಮಹತ್ಯೆ ಮಾಡಿಕೊಂಡ ಬಾಲಕಿಯು ಸ್ಥಳೀಯ ಮ್ಯೂಸಿಕ್ (ಸಂಗೀತ) ತಂಡವೊಂದರ ಸದಸ್ಯೆಯಾಗಿದ್ದಳು. ಆ ತಂಡದ ಕೆಲವು ಸದಸ್ಯರು ತೀವ್ರ ಮಾದಕ ದ್ರವ್ಯ ವ್ಯಸನಿಗಳಾಗಿದ್ದು, ಅವರ ಮೇಲೆ ಈ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕರಣಗಳು ದಾಖಲಾಗಿದ್ದವು. ಇದೇ ತಂಡದ ಸದಸ್ಯರು ಬಾಲಕಿಗೆ ದೈಹಿಕವಾಗಿ ತೀವ್ರ ಕಿರುಕುಳ ನೀಡಿದ್ದಾರೆ. ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು, ಮಾನಸಿಕ ನೊಂದ ಬೆನ್ನಲ್ಲೇ ಇದೀಗ ಆತ್ಮಹತ್ಯೆಯ ಹಾದಿ ಹಿಡಿದಿದ್ದಾಳೆ” ಎಂದು ಕಮಿಷನರ್ ತನಿಖೆಯ ವಿವರಗಳನ್ನು ಬಿಚ್ಚಿಟ್ಟರು.
ಪ್ರಕರಣದಲ್ಲಿ ಪೋಷಕರ ನಡೆ ಹಾಗೂ ನಿಗಾ ವಹಿಸದ ಧೋರಣೆಯ ಕುರಿತು ಕಮಿಷನರ್ ತೀವ್ರ ವಿಷಾದ ವ್ಯಕ್ತಪಡಿಸಿದರು. “ಬಾಲಕಿಯ ಕುರಿತ ಕೆಲವೊಂದು ಆತಂಕಕಾರಿ ವಿಚಾರಗಳು ಮೊದಲೇ ಗೊತ್ತಿದ್ದರೂ ಹೆತ್ತವರು ದೀರ್ಘಕಾಲ ಮೌನವಾಗಿದ್ದರಿಂದ ಪರಿಸ್ಥಿತಿ ಇಷ್ಟು ಗಂಭೀರ ಸ್ಥಿತಿಗೆ ತಲುಪುವಂತಾಯಿತು. ಬಾಲಕಿ ಮ್ಯೂಸಿಕ್ ತಂಡದ ನೆಪದಲ್ಲಿ ತಡರಾತ್ರಿ ಮನೆಗೆ ಬರುತ್ತಿದ್ದಾಗ ಹೆತ್ತವರು ಆಕೆಯನ್ನು ಪ್ರಶ್ನಿಸಬೇಕಾಗಿತ್ತು. ಕಳೆದ ಒಂದು ವರ್ಷದಿಂದಲೂ ಮೌನವಾಗಿದ್ದ ಹೆತ್ತವರು, ಈಗ ಘಟನೆ ನಡೆದ ಬಳಿಕ ಆರೋಪಿಗಳ ಪತ್ತೆಗೆ ಆಗ್ರಹಿಸುತ್ತಿದ್ದಾರೆ. ನಮ್ಮ ಇಲಾಖೆ ಖಂಡಿತವಾಗಿಯೂ ಆರೋಪಿಯನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತದೆ. ಆದರೆ, ಹೆತ್ತವರಿಗೂ ಮಕ್ಕಳ ನಡವಳಿಕೆಯ ಮೇಲೆ ಜವಾಬ್ದಾರಿ ಇರಬೇಕಾಗಿತ್ತು” ಎಂದು ಅವರು ಕಿವಿಮಾತು ಹೇಳಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…