ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಹಾಗೂ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಾಲಕಿಯ ಕುರಿತ ಕೆಲವೊಂದು ವಿಚಾರಗಳು ಗೊತ್ತಿದ್ದರೂ ಹೆತ್ತವರು ಮೌನವಾಗಿದ್ದರಿಂದ ಗಂಭೀರ ಸ್ಥಿತಿಗೆ ತಲುಪುವಂತಾಯಿತು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಈ ಪ್ರಕರಣದ ಗಂಭೀರತೆಯನ್ನು ಪ್ರಸ್ತಾಪಿಸಿ ಅವರು ಮಾತನಾಡಿದರು.
“ಆತ್ಮಹತ್ಯೆ ಮಾಡಿಕೊಂಡ ಬಾಲಕಿಯು ಸ್ಥಳೀಯ ಮ್ಯೂಸಿಕ್ (ಸಂಗೀತ) ತಂಡವೊಂದರ ಸದಸ್ಯೆಯಾಗಿದ್ದಳು. ಆ ತಂಡದ ಕೆಲವು ಸದಸ್ಯರು ತೀವ್ರ ಮಾದಕ ದ್ರವ್ಯ ವ್ಯಸನಿಗಳಾಗಿದ್ದು, ಅವರ ಮೇಲೆ ಈ ಹಿಂದೆಯೇ ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕರಣಗಳು ದಾಖಲಾಗಿದ್ದವು. ಇದೇ ತಂಡದ ಸದಸ್ಯರು ಬಾಲಕಿಗೆ ದೈಹಿಕವಾಗಿ ತೀವ್ರ ಕಿರುಕುಳ ನೀಡಿದ್ದಾರೆ. ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು, ಮಾನಸಿಕ ನೊಂದ ಬೆನ್ನಲ್ಲೇ ಇದೀಗ ಆತ್ಮಹತ್ಯೆಯ ಹಾದಿ ಹಿಡಿದಿದ್ದಾಳೆ” ಎಂದು ಕಮಿಷನರ್ ತನಿಖೆಯ ವಿವರಗಳನ್ನು ಬಿಚ್ಚಿಟ್ಟರು.
ಪ್ರಕರಣದಲ್ಲಿ ಪೋಷಕರ ನಡೆ ಹಾಗೂ ನಿಗಾ ವಹಿಸದ ಧೋರಣೆಯ ಕುರಿತು ಕಮಿಷನರ್ ತೀವ್ರ ವಿಷಾದ ವ್ಯಕ್ತಪಡಿಸಿದರು. “ಬಾಲಕಿಯ ಕುರಿತ ಕೆಲವೊಂದು ಆತಂಕಕಾರಿ ವಿಚಾರಗಳು ಮೊದಲೇ ಗೊತ್ತಿದ್ದರೂ ಹೆತ್ತವರು ದೀರ್ಘಕಾಲ ಮೌನವಾಗಿದ್ದರಿಂದ ಪರಿಸ್ಥಿತಿ ಇಷ್ಟು ಗಂಭೀರ ಸ್ಥಿತಿಗೆ ತಲುಪುವಂತಾಯಿತು. ಬಾಲಕಿ ಮ್ಯೂಸಿಕ್ ತಂಡದ ನೆಪದಲ್ಲಿ ತಡರಾತ್ರಿ ಮನೆಗೆ ಬರುತ್ತಿದ್ದಾಗ ಹೆತ್ತವರು ಆಕೆಯನ್ನು ಪ್ರಶ್ನಿಸಬೇಕಾಗಿತ್ತು. ಕಳೆದ ಒಂದು ವರ್ಷದಿಂದಲೂ ಮೌನವಾಗಿದ್ದ ಹೆತ್ತವರು, ಈಗ ಘಟನೆ ನಡೆದ ಬಳಿಕ ಆರೋಪಿಗಳ ಪತ್ತೆಗೆ ಆಗ್ರಹಿಸುತ್ತಿದ್ದಾರೆ. ನಮ್ಮ ಇಲಾಖೆ ಖಂಡಿತವಾಗಿಯೂ ಆರೋಪಿಯನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತದೆ. ಆದರೆ, ಹೆತ್ತವರಿಗೂ ಮಕ್ಕಳ ನಡವಳಿಕೆಯ ಮೇಲೆ ಜವಾಬ್ದಾರಿ ಇರಬೇಕಾಗಿತ್ತು” ಎಂದು ಅವರು ಕಿವಿಮಾತು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…