ಸುರತ್ಕಲ್: ಸುರತ್ಕಲ್ ಬೀಚ್ ಗೆ ಬಂದಿದ್ದ ಅನ್ಯಮತೀಯ ಜೋಡಿಯನ್ನು ಗಮನಿಸಿದ ಸುರತ್ಕಲ್ ಬಜರಂಗದಳದ ಕಾರ್ಯಕರ್ತರು ಅವರನ್ನು ಪೊಲೀಸರಿಗೆ ಒಪ್ಪಿಸಲು ಮುಂದಾದಾಗ ಜೋಡಿ ತಪ್ಪಿಸಿಕೊಂಡು ಪರಾರಿಯಾದರೆ, ಇನ್ನೋರ್ವ ಯುವಕ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದು ಸುರತ್ಕಲ್ ಠಾಣೆಗೆ ಒಪ್ಪಿಸಿದ ಘಟನೆ ನ .19 ರ ಶುಕ್ರವಾರ ನಡೆದಿದೆ.
ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದ ಹುಬ್ಬಳ್ಳಿ ಮೂಲದ ಯುವತಿಯೊಬ್ಬಳನ್ನು ಕುದ್ರೋಳಿ ಮೂಲದ ಯುವಕ ಪುಸಲಾಯಿಸಿ ತನ್ನ ಸ್ನೇಹಿತನ ಜತೆಗೂಡಿ ಬೀಚಿಗೆ ಕರೆದುಕೊಂಡು ಬಂದಿದ್ದ ಎನ್ನಲಾಗಿದೆ. ಮಾಹಿತಿ ಪಡೆದ ಕಾರ್ಯಕರ್ತರು ವಿಚಾರಿಸಲು ಮುಂದಾದಾಗ ತಪ್ಪಿಸಿಕೊಂಡಿದ್ದು ಯುವಕನ ಸ್ನೇಹಿತ ದೀಪಕನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.
ಪೊಲೀಸರು ತಪ್ಪಿಸಿಕೊಂಡ ಯುವಕನ ಹುಡುಕಾಟ ನಡೆಸಿದ್ದಾರೆ . ಆಸೆ ಆಮಿಷಗಳನ್ನು ಒಡ್ಡಿ ಯುವತಿಯನ್ನು ಕರೆ ತರಲಾಗಿದ್ದು ಲವ್ ಜಿಹಾದ್ ಭಾಗವಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ರ ತನಿಖೆ ನಡೆಸದಿದ್ದಲ್ಲಿ ಉಗ್ರ ಹೋರಾಟ ನಡೆಸಲೇಕಾಗುತ್ತದೆ ಎಂದು ಬಜರಂಗದಳ ಎಚ್ಚರಿಸಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…