ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ ಜಿ ಎಸ್ ಟಿ ಯನ್ನು ಟೆಂಡರ್ ನಲ್ಲಿ ತೋರಿಸದ ಕಾರಣ ಭಾರಿ ನಷ್ಟವಾಗುತ್ತದೆ ಎಂದು ಕಾಮಗಾರಿ ನಡೆಸಲು ಹಿಂದೆ ಸರಿದಿದ್ದರು.
ಇದೀಗ ತಾನು ಸತತವಾಗಿ ಈ ಹಿಂದಿನ ಬಿಜೆಪಿ ಸರಕಾರವಿದ್ದಾಗ ಹಣಕಾಸು ಇಲಾಖೆ , ನಗರಾಭಿವೃದ್ಧಿ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದ ಮೇರೆಗೆ ಟೆಂಡರ್ ನಡೆಸುವ ಪ್ರಾಥಮಿಕ ಹೆಜ್ಜೆ ಇರಿಸಲಾಗಿತ್ತು.
ಬದಲಾದ ಸರಕಾರದಲ್ಲಿ ಈಗಿನ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಲ್ಲಿ ಖುದ್ದಾಗಿ ಭೇಟಿ ನೀಡಿ ಮಾಡಿದ ಮನವಿಗೆ ಸ್ಪಂದಿಸಿದ್ದು, ಆರ್ಥಿಕ ಇಲಾಖೆಯು ಕೂಡ ಅನುಮೋದನೆ ನೀಡಿದ್ದು ಟೆಂಡರ್ ನೀಡಲಾಗಿದೆ. ಸರಕಾರವು ವಿಳಂಬ ಮಾಡದೆ ಗುತ್ತಿಗೆದಾರರಿಗೆ ಅನುಮತಿ ಪತ್ರ ನೀಡಿದ ತಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದು ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…