ಸುರತ್ಕಲ್: ಸುರತ್ಕಲ್ ನಗರದಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕುದರ ಏರಿಕೆ ಹಾಗೂ ಜಿಎಸ್ಟಿಯನ್ಬು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು. ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ ಜಿ ಎಸ್ ಟಿ ಯನ್ನು ಟೆಂಡರ್ ನಲ್ಲಿ ತೋರಿಸದ ಕಾರಣ ಭಾರಿ ನಷ್ಟವಾಗುತ್ತದೆ ಎಂದು ಕಾಮಗಾರಿ ನಡೆಸಲು ಹಿಂದೆ ಸರಿದಿದ್ದರು.
ಇದೀಗ ತಾನು ಸತತವಾಗಿ ಈ ಹಿಂದಿನ ಬಿಜೆಪಿ ಸರಕಾರವಿದ್ದಾಗ ಹಣಕಾಸು ಇಲಾಖೆ , ನಗರಾಭಿವೃದ್ಧಿ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದ ಮೇರೆಗೆ ಟೆಂಡರ್ ನಡೆಸುವ ಪ್ರಾಥಮಿಕ ಹೆಜ್ಜೆ ಇರಿಸಲಾಗಿತ್ತು.
ಬದಲಾದ ಸರಕಾರದಲ್ಲಿ ಈಗಿನ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಲ್ಲಿ ಖುದ್ದಾಗಿ ಭೇಟಿ ನೀಡಿ ಮಾಡಿದ ಮನವಿಗೆ ಸ್ಪಂದಿಸಿದ್ದು, ಆರ್ಥಿಕ ಇಲಾಖೆಯು ಕೂಡ ಅನುಮೋದನೆ ನೀಡಿದ್ದು ಟೆಂಡರ್ ನೀಡಲಾಗಿದೆ. ಸರಕಾರವು ವಿಳಂಬ ಮಾಡದೆ ಗುತ್ತಿಗೆದಾರರಿಗೆ ಅನುಮತಿ ಪತ್ರ ನೀಡಿದ ತಕ್ಷಣ ಕಾಮಗಾರಿ ಆರಂಭವಾಗಲಿದೆ ಎಂದು ಭರತ್ ಶೆಟ್ಟಿ ವೈ ಹೇಳಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…