ಸುರತ್ಕಲ್ : ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, ಹಲವರಿಗೆ ಗಾಯವಾದ ಘಟನೆ ಸುರತ್ಕಲ್ – ಎಂಆರ್ ಪಿಎಲ್ ರಸ್ತೆಯ ಕಾನ ಕಟ್ಲ ಸೀತಾ ಕಾಂಪೌಂ ಡ್ ಬಳಿಯ ಮಿಲ್ಕ್ ಪಾರ್ಲರ್ ಸಮೀಪ ಭಾನುವಾರ ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಕಾನ ಗಣೇಶ್ ಬೀಡಿ ಸಮೀಪದ ನಿವಾಸಿ ಯಶೋಧರ (23) ಮೃತ ದುರ್ದೈವಿ.
ಘಟನೆಯಲ್ಲಿ ಮೃತಪಟ್ಟವರ ಬೈಕ್ ನ ಹಿಂಬದಿ ಸವಾರ ಕಾನ ಕಟ್ಟೆ ಬಳಿಯ ನಿವಾಸಿ ಕಿಶೋರ್(18) ಅವರಿಗೆ ಗಾಯವಾಗಿದೆ. ಜೊತೆಗೆ ಇನ್ನೊಂದು ವಾಹನದಲ್ಲಿ ಸಂಚರಿಸುತ್ತಿದ್ದ ಕೇರಳ ನಿವಾಸಿಗಳು ಹಾಗೂ ಮುಕ್ಕ ಕಾಲೇಜೊಂದರ ವಿದ್ಯಾರ್ಥಿಗಳಾದ ಅಮನ್(21), ಮುಹಮ್ಮದ್ ಆದಿಲ್(21), ಮುಹಮ್ಮದ್ ತಫಾದ್(21) ಎಂಬವರಿಗೆ ಗಾಯಗಳಾಗಿವೆ.
ಇನ್ನು ಗಾಯಾಳುಗಳನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೃತ ಯಶೋಧರ ಹಾಗೂ ಕಿಶೋರ್ ಅವರು ಲೈಟಿಂಗ್ ಕೆಲಸ ಮುಗಿಸಿ ಬರುತ್ತಿದ್ದರು. ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಗೆ ಒಂದೇ ಬೈಕ್ ನಲ್ಲಿ ಮೂವರು ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…