ಸುರತ್ಕಲ್ : ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿ, ಹಲವರಿಗೆ ಗಾಯವಾದ ಘಟನೆ ಸುರತ್ಕಲ್ – ಎಂಆರ್ ಪಿಎಲ್ ರಸ್ತೆಯ ಕಾನ ಕಟ್ಲ ಸೀತಾ ಕಾಂಪೌಂ ಡ್ ಬಳಿಯ ಮಿಲ್ಕ್ ಪಾರ್ಲರ್ ಸಮೀಪ ಭಾನುವಾರ ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಕಾನ ಗಣೇಶ್ ಬೀಡಿ ಸಮೀಪದ ನಿವಾಸಿ ಯಶೋಧರ (23) ಮೃತ ದುರ್ದೈವಿ.
ಘಟನೆಯಲ್ಲಿ ಮೃತಪಟ್ಟವರ ಬೈಕ್ ನ ಹಿಂಬದಿ ಸವಾರ ಕಾನ ಕಟ್ಟೆ ಬಳಿಯ ನಿವಾಸಿ ಕಿಶೋರ್(18) ಅವರಿಗೆ ಗಾಯವಾಗಿದೆ. ಜೊತೆಗೆ ಇನ್ನೊಂದು ವಾಹನದಲ್ಲಿ ಸಂಚರಿಸುತ್ತಿದ್ದ ಕೇರಳ ನಿವಾಸಿಗಳು ಹಾಗೂ ಮುಕ್ಕ ಕಾಲೇಜೊಂದರ ವಿದ್ಯಾರ್ಥಿಗಳಾದ ಅಮನ್(21), ಮುಹಮ್ಮದ್ ಆದಿಲ್(21), ಮುಹಮ್ಮದ್ ತಫಾದ್(21) ಎಂಬವರಿಗೆ ಗಾಯಗಳಾಗಿವೆ.
ಇನ್ನು ಗಾಯಾಳುಗಳನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೃತ ಯಶೋಧರ ಹಾಗೂ ಕಿಶೋರ್ ಅವರು ಲೈಟಿಂಗ್ ಕೆಲಸ ಮುಗಿಸಿ ಬರುತ್ತಿದ್ದರು. ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಗೆ ಒಂದೇ ಬೈಕ್ ನಲ್ಲಿ ಮೂವರು ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…