ಸುರತ್ಕಲ್ ಮತ್ತು ಬಜ್ಪೆ ಠಾಣಾ ವ್ಯಾಪ್ತಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ – Vishwanews24
ಸುರತ್ಕಲ್ ಮತ್ತು ಬಜ್ಪೆ ಠಾಣಾ ವ್ಯಾಪ್ತಿಗೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ – Vishwanews24
ಮಂಗಳೂರು: ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮತ್ತು ಪೊಲೀಸ್ ಸಿಬಂದಿಗಳನ್ನು ಭೇಟಿಯಾದರು.
ಈ ವೇಳೆ ಸಾರ್ವಜನಿಕರು ಮತ್ತು ಪೊಲೀಸ್ ಸಿಬಂದಿಗಳೊಂದಿಗೆ ಸಂವಾದ ನಡೆಸಿ ಇತ್ತೀಚಿನ ಘಟನೆಗಳ ಕುರಿತು ಪೊಲೀಸ್ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿಯನ್ನು ಹಂಚಿಕೊಂಡರು.
ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ನಿಷೇಧಾಜ್ಞೆಯನ್ನು ಅಗಸ್ಟ್ 5 ರ ತನಕ ವಿಸ್ತರಿಸಲಾಗಿದೆ.
