ಸುರತ್ಕಲ್ : ಶೈಕ್ಷಣಿಕ ಕಲಿಕೆಯಲ್ಲಿ ಹಿಂದಿದ್ದ ಬಾಲಕನೊಬ್ಬ, ಮದರಸದಿಂದ ಹಿಂತಿರುಗುವ ವೇಳೆ ತನ್ನ ಮೇಲೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು ಎಂದು ಮಾಡಿರುವ ಆರೋಪ, ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ತನಿಖೆ ವೇಳೆ ಸಾಬೀತಾಗಿದೆ.
ಕಾಟಿಪಳ್ಳ ನಿವಾಸಿಯೋರ್ವರ ಪುತ್ರ, 6ನೇ ತರಗತಿ ಬಾಲಕರಂದು ಸಂಜೆ ಮದ್ರಸದ ಪಾಠ ಮುಗಿಸಿ ಮನೆಗೆ ಹೋಗುವ ಸಂದರ್ಭ ಹಲ್ಲೆ ನಡೆದಿದೆ ಎಂದು ಅಪ್ರಾಪ್ತ ಹುಡುಗ ಹಾಗೂ ಆತನ ಕುಟುಂಬಸ್ಥರು ದೂರು ನೀಡಿದ್ದರು.
ಕೋಮು ಸೌಹಾರ್ಧತೆಗೆ ಧಕ್ಕೆ ತರುವ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಆದರೆ, ಬಾಲಕ ಪೆನ್ನು ಬಳಸಿ ಶರ್ಟ್ ಹರಿದು ಹಾಕಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ತನಿಖೆ ವೇಳೆ ಸಾಬೀತಾಗಿದೆ.
“ಘಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ, ನಮ್ಮ ಅಧಿಕಾರಿಗಳು ತನಿಖೆಯನ್ನು ತ್ವರಿತವಾಗಿ ಕೈಗೆತ್ತಿಕೊಂಡರು ಮತ್ತು ಸಾಂದರ್ಭಿಕ ಸಾಕ್ಷಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು ಸೇರಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಇದೇ ವೇಳೆ ನಾನು ಮತ್ತು ನನ್ನ ತಂಡ ಮಕ್ಕಳ ಕಲ್ಯಾಣ ಸಮಿತಿ ಪ್ರತಿನಿಧಿಗಳು ಮತ್ತು ವೈದ್ಯರ ಸಮ್ಮುಖದಲ್ಲಿ ಬಾಲಕನೊಂದಿಗೆ ಸಂವಾದ ನಡೆಸಿದೆವು. ವಾಸ್ತವವಾಗಿ, ಹುಡುಗ ಕಲಿಕೆಯಲ್ಲಿ ಹಿನ್ನಡೆಯಿದ್ದು, ಶಾಲೆಯಲ್ಲಿ ಆತ್ಮೀಯ ಸ್ನೇಹಿತರಿಲ್ಲ ಎಂಬ ಭಾವನೆ ಇದೆ. ಮನೆಯಲ್ಲಿನ ಬಡತನವಿದ್ದು ಈ ಎಲ್ಲಾ ಕಿರಿಕಿರಿಯಿಂದ ನೊಂದಿದ್ದ ಬಾಲಕ ಪೆನ್ನಿನಿಂದ ಶರ್ಟ್ ಹರಿದುಕೊಂಡು ಎಲ್ಲರ ಗಮನ ಸೆಳೆಯಲು ಈ ರೀತಿಯ ಕಥೆ ಕಟ್ಟಿದ್ದ ಸಾಂದರ್ಭಿಕ ಪುರಾವೆಗಳು ಬಾಲಕ ತನ್ನ ಪೆನ್ನಿನಿಂದ ಶರ್ಟ್ ಹರಿದುಕೊಂಡಿರುವುದು ಸಾಬೀತಾಗಿದೆ. ಬಾಲಕ ಧಾರ್ಮಿಕ ಅಧ್ಯಯನ ನಡೆಸುತ್ತಿದ್ದ ಮದರಸಾದ ಧಾರ್ಮಿಕ ಮುಖಂಡರು ಮತ್ತು ಆಡಳಿತ ಮಂಡಳಿಗೆ ಪ್ರಕರಣದ ಬಗ್ಗೆ ಮನವರಿಕೆ ಮಾಡಿದ್ದೇವೆ. ಈ ಘಟನೆಯು ಕೋಮು ಉದ್ವಿಗ್ನತೆಗೆ ಕಾರಣವಾಗುವ ದ್ವೇಷದ ಸಂದೇಶಗಳನ್ನು ಹರಡಲು ಕಾರಣವಾಗಿರುವುದರಿಂದ ನಾವು ಅವುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದೇವೆ ಎಂದು ಅವರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…