ಸುರತ್ಕಲ್ : ಶೈಕ್ಷಣಿಕ ಕಲಿಕೆಯಲ್ಲಿ ಹಿಂದಿದ್ದ ಬಾಲಕನೊಬ್ಬ, ಮದರಸದಿಂದ ಹಿಂತಿರುಗುವ ವೇಳೆ ತನ್ನ ಮೇಲೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು ಎಂದು ಮಾಡಿರುವ ಆರೋಪ, ಸತ್ಯಕ್ಕೆ ದೂರವಾದದ್ದು ಎಂದು ಪೊಲೀಸ್ ತನಿಖೆ ವೇಳೆ ಸಾಬೀತಾಗಿದೆ.
ಕಾಟಿಪಳ್ಳ ನಿವಾಸಿಯೋರ್ವರ ಪುತ್ರ, 6ನೇ ತರಗತಿ ಬಾಲಕರಂದು ಸಂಜೆ ಮದ್ರಸದ ಪಾಠ ಮುಗಿಸಿ ಮನೆಗೆ ಹೋಗುವ ಸಂದರ್ಭ ಹಲ್ಲೆ ನಡೆದಿದೆ ಎಂದು ಅಪ್ರಾಪ್ತ ಹುಡುಗ ಹಾಗೂ ಆತನ ಕುಟುಂಬಸ್ಥರು ದೂರು ನೀಡಿದ್ದರು.
ಕೋಮು ಸೌಹಾರ್ಧತೆಗೆ ಧಕ್ಕೆ ತರುವ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಆದರೆ, ಬಾಲಕ ಪೆನ್ನು ಬಳಸಿ ಶರ್ಟ್ ಹರಿದು ಹಾಕಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ತನಿಖೆ ವೇಳೆ ಸಾಬೀತಾಗಿದೆ.
“ಘಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿ, ನಮ್ಮ ಅಧಿಕಾರಿಗಳು ತನಿಖೆಯನ್ನು ತ್ವರಿತವಾಗಿ ಕೈಗೆತ್ತಿಕೊಂಡರು ಮತ್ತು ಸಾಂದರ್ಭಿಕ ಸಾಕ್ಷಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು ಸೇರಿದಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದರು. ಇದೇ ವೇಳೆ ನಾನು ಮತ್ತು ನನ್ನ ತಂಡ ಮಕ್ಕಳ ಕಲ್ಯಾಣ ಸಮಿತಿ ಪ್ರತಿನಿಧಿಗಳು ಮತ್ತು ವೈದ್ಯರ ಸಮ್ಮುಖದಲ್ಲಿ ಬಾಲಕನೊಂದಿಗೆ ಸಂವಾದ ನಡೆಸಿದೆವು. ವಾಸ್ತವವಾಗಿ, ಹುಡುಗ ಕಲಿಕೆಯಲ್ಲಿ ಹಿನ್ನಡೆಯಿದ್ದು, ಶಾಲೆಯಲ್ಲಿ ಆತ್ಮೀಯ ಸ್ನೇಹಿತರಿಲ್ಲ ಎಂಬ ಭಾವನೆ ಇದೆ. ಮನೆಯಲ್ಲಿನ ಬಡತನವಿದ್ದು ಈ ಎಲ್ಲಾ ಕಿರಿಕಿರಿಯಿಂದ ನೊಂದಿದ್ದ ಬಾಲಕ ಪೆನ್ನಿನಿಂದ ಶರ್ಟ್ ಹರಿದುಕೊಂಡು ಎಲ್ಲರ ಗಮನ ಸೆಳೆಯಲು ಈ ರೀತಿಯ ಕಥೆ ಕಟ್ಟಿದ್ದ ಸಾಂದರ್ಭಿಕ ಪುರಾವೆಗಳು ಬಾಲಕ ತನ್ನ ಪೆನ್ನಿನಿಂದ ಶರ್ಟ್ ಹರಿದುಕೊಂಡಿರುವುದು ಸಾಬೀತಾಗಿದೆ. ಬಾಲಕ ಧಾರ್ಮಿಕ ಅಧ್ಯಯನ ನಡೆಸುತ್ತಿದ್ದ ಮದರಸಾದ ಧಾರ್ಮಿಕ ಮುಖಂಡರು ಮತ್ತು ಆಡಳಿತ ಮಂಡಳಿಗೆ ಪ್ರಕರಣದ ಬಗ್ಗೆ ಮನವರಿಕೆ ಮಾಡಿದ್ದೇವೆ. ಈ ಘಟನೆಯು ಕೋಮು ಉದ್ವಿಗ್ನತೆಗೆ ಕಾರಣವಾಗುವ ದ್ವೇಷದ ಸಂದೇಶಗಳನ್ನು ಹರಡಲು ಕಾರಣವಾಗಿರುವುದರಿಂದ ನಾವು ಅವುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದೇವೆ ಎಂದು ಅವರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…