Featured

ಸುರತ್ಕಲ್ :  ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ಮೊಬೈಲ್ ಪಡೆದ ಅಪರಿಚಿತ ವ್ಯಕ್ತಿ ಮೊಬೈಲ್ ಜೊತೆ ಎಸ್ಕೇಪ್ – vishwanews24

ಸುರತ್ಕಲ್ :  ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ಮೊಬೈಲ್ ಪಡೆದ ಅಪರಿಚಿತ ವ್ಯಕ್ತಿ ಮೊಬೈಲ್ ಜೊತೆ ಎಸ್ಕೇಪ್

ಸುರತ್ಕಲ್ : ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ವ್ಯಕ್ತಿಯೊಬ್ಬರಿಂದ ಮೊಬೈಲ್ ಪಡೆದು ಬಳಿಕ ಮೊಬೈಲ್ ಜೊತೆ ಪರಾರಿಯಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.

ಸುರತ್ಕಲ್ ನಗರದಲ್ಲಿ ಮನೆಮನೆಗೆ ಪೇಪರ್ ಹಾಕುವ ಮೊಹಮ್ಮದ್ ಇಕ್ಬಾಲ್ ಅವರು ನವೆಂಬರ್ 17 ರಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸುರತ್ಕಲ್ ನಗರದ ಕೆನರಾಬ್ಯಾಂಕ್ ವೃತ್ತದಲ್ಲಿ ದಿನಪತ್ರಿಕೆಗಳಿಗೆ ಅವುಗಳಿಗೆ ಸಂಬಂಧಿಸಿದ ಪುರವಣಿಗಳನ್ನು ಜೋಡಿಸುತ್ತಿದ್ದರು. ಅಷ್ಟರಲ್ಲಿ ಸ್ಕೂಟರ್ ನಲ್ಲಿ ಆಗಮಿಸಿದ ಅಪರಿತನೊಬ್ಬ , ಮನೆಗೆ ಅರ್ಜೆಂಟಾಗಿ ಫೋನ್ ಮಾಡಬೇಕು. ದಯವಿಟ್ಟು ಸ್ವಲ್ಪ ಫೋನ್ ಕೊಡ್ತೀರಾ. ನಾನು ನನ್ನ ಪರ್ಸ್ ಹಾಗೂ ಮೊಬೈಲನ್ನು ಮನೆಯಲ್ಲೇ ಬಿಟ್ಟುಬಂದಿದ್ದೇನೆ ಎಂದು ಹೇಳಿದ್ದಾನೆ.

ಅನುಮಾನಗೊಂಡ ಇಕ್ಬಾಲ್, ಆತನಿಗೆ ಮೊಬೈಲ್ ಕೊಟ್ಟಿಲ್ಲ. ಆದರೂ, ಆತ ಪದ ಪದೇ ಮೊಬೈಲ್ ಕೊಡುವಂತೆ ಅಂಗಲಾಚಿ ಬೇಡಿಕೊಂಡಿದ್ದಾನೆ. ಕಡೆಗೆ ಮಾನವೀಯ ದೃಷ್ಟಿಯಿಂದ ಮನಸ್ಸು ಬದಲಾಯಿಸಿಕೊಂಡ ಇಕ್ಬಾಲ್ ಅವರು ತಮ್ಮಲ್ಲಿದ್ದ ಮೊಬೈಲನ್ನು ಆತನ ಕೈಗೆ ಕೊಟ್ಟಿದ್ದಾನೆ. ಅಷ್ಟೇ.. ಮೊಬೈಲ್ ಇಸ್ಕೊಂಡವನು ಹಾಗೇ ತನ್ನ ಮನೆಗೆ ಡಯಲ್ ಮಾಡುವಂತೆ ನಾಟಕವಾಡಿ ಕೂಡಲೇ ಆನ್ ನಲ್ಲೇ ಇದ್ದ ಸ್ಕೂಟಿಯಲ್ಲಿ ಕಾಲ್ಕಿತ್ತಿದ್ದಾನೆ.

ಕೂಡಲೇ ಇಕ್ಬಾಲ್ ಅವರು ರಸ್ತೆಗಿಳಿದು ಆತನನ್ನು ಬೆನ್ನಟ್ಟಿದ್ದಾರೆ. ಆದರೂ, ಸ್ಕೂಟಿಯಲ್ಲಿ ವೇಗವಾಗಿ ಓಡಿದ ಅವರು, ಸಮೀಪದ ಒಳರಸ್ತೆಯಲ್ಲಿ ಸ್ಕೂಟಿ ನುಗ್ಗಿಸಿಕೊಂಡು ಪರಾರಿಯಾಗಿದ್ದಾನೆ. ಅದೇ ಒಳರಸ್ತೆಯಲ್ಲಿ ಇಕ್ಪಾಲ್ ಕೂಡ ನುಗ್ಗಿ ಹೋದರಾದರೂ ಆತ ಕೈಯ್ಯಿಗೆ ಸಿಕ್ಕಿಲ್ಲ. ಅಂದಾಜು 27 ಸಾವಿರ ರೂ. ಮುಖಬೆಲೆಯ ಮೊಬೈಲನ್ನು ಹೀಗೆ ಎಗರಿಸಿಕೊಂಡು ಹೋಗಿದ್ದಾನೆ ಆತ. ಇಕ್ಬಾಲ್ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

22 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

22 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

23 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

23 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago