ಸುರತ್ಕಲ್ : ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಅರ್ಜೆಂಟ್ ಕಾಲ್ ಮಾಡಬೇಕೆಂದು ವ್ಯಕ್ತಿಯೊಬ್ಬರಿಂದ ಮೊಬೈಲ್ ಪಡೆದು ಬಳಿಕ ಮೊಬೈಲ್ ಜೊತೆ ಪರಾರಿಯಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಸುರತ್ಕಲ್ ನಗರದಲ್ಲಿ ಮನೆಮನೆಗೆ ಪೇಪರ್ ಹಾಕುವ ಮೊಹಮ್ಮದ್ ಇಕ್ಬಾಲ್ ಅವರು ನವೆಂಬರ್ 17 ರಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಸುರತ್ಕಲ್ ನಗರದ ಕೆನರಾಬ್ಯಾಂಕ್ ವೃತ್ತದಲ್ಲಿ ದಿನಪತ್ರಿಕೆಗಳಿಗೆ ಅವುಗಳಿಗೆ ಸಂಬಂಧಿಸಿದ ಪುರವಣಿಗಳನ್ನು ಜೋಡಿಸುತ್ತಿದ್ದರು. ಅಷ್ಟರಲ್ಲಿ ಸ್ಕೂಟರ್ ನಲ್ಲಿ ಆಗಮಿಸಿದ ಅಪರಿತನೊಬ್ಬ , ಮನೆಗೆ ಅರ್ಜೆಂಟಾಗಿ ಫೋನ್ ಮಾಡಬೇಕು. ದಯವಿಟ್ಟು ಸ್ವಲ್ಪ ಫೋನ್ ಕೊಡ್ತೀರಾ. ನಾನು ನನ್ನ ಪರ್ಸ್ ಹಾಗೂ ಮೊಬೈಲನ್ನು ಮನೆಯಲ್ಲೇ ಬಿಟ್ಟುಬಂದಿದ್ದೇನೆ ಎಂದು ಹೇಳಿದ್ದಾನೆ.
ಅನುಮಾನಗೊಂಡ ಇಕ್ಬಾಲ್, ಆತನಿಗೆ ಮೊಬೈಲ್ ಕೊಟ್ಟಿಲ್ಲ. ಆದರೂ, ಆತ ಪದ ಪದೇ ಮೊಬೈಲ್ ಕೊಡುವಂತೆ ಅಂಗಲಾಚಿ ಬೇಡಿಕೊಂಡಿದ್ದಾನೆ. ಕಡೆಗೆ ಮಾನವೀಯ ದೃಷ್ಟಿಯಿಂದ ಮನಸ್ಸು ಬದಲಾಯಿಸಿಕೊಂಡ ಇಕ್ಬಾಲ್ ಅವರು ತಮ್ಮಲ್ಲಿದ್ದ ಮೊಬೈಲನ್ನು ಆತನ ಕೈಗೆ ಕೊಟ್ಟಿದ್ದಾನೆ. ಅಷ್ಟೇ.. ಮೊಬೈಲ್ ಇಸ್ಕೊಂಡವನು ಹಾಗೇ ತನ್ನ ಮನೆಗೆ ಡಯಲ್ ಮಾಡುವಂತೆ ನಾಟಕವಾಡಿ ಕೂಡಲೇ ಆನ್ ನಲ್ಲೇ ಇದ್ದ ಸ್ಕೂಟಿಯಲ್ಲಿ ಕಾಲ್ಕಿತ್ತಿದ್ದಾನೆ.
ಕೂಡಲೇ ಇಕ್ಬಾಲ್ ಅವರು ರಸ್ತೆಗಿಳಿದು ಆತನನ್ನು ಬೆನ್ನಟ್ಟಿದ್ದಾರೆ. ಆದರೂ, ಸ್ಕೂಟಿಯಲ್ಲಿ ವೇಗವಾಗಿ ಓಡಿದ ಅವರು, ಸಮೀಪದ ಒಳರಸ್ತೆಯಲ್ಲಿ ಸ್ಕೂಟಿ ನುಗ್ಗಿಸಿಕೊಂಡು ಪರಾರಿಯಾಗಿದ್ದಾನೆ. ಅದೇ ಒಳರಸ್ತೆಯಲ್ಲಿ ಇಕ್ಪಾಲ್ ಕೂಡ ನುಗ್ಗಿ ಹೋದರಾದರೂ ಆತ ಕೈಯ್ಯಿಗೆ ಸಿಕ್ಕಿಲ್ಲ. ಅಂದಾಜು 27 ಸಾವಿರ ರೂ. ಮುಖಬೆಲೆಯ ಮೊಬೈಲನ್ನು ಹೀಗೆ ಎಗರಿಸಿಕೊಂಡು ಹೋಗಿದ್ದಾನೆ ಆತ. ಇಕ್ಬಾಲ್ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…