Featured

ಸುರತ್ಕಲ್:  ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ : ರಿಕ್ಷ ಚಾಲಕನಿಗೆ ಗಾಯ – Vishwanews24

ಸುರತ್ಕಲ್:  ಮಾದಕ ವ್ಯಸನಿ ದುಷ್ಕರ್ಮಿಗಳಿಂದ ತಲವಾರು ದಾಳಿ : ರಿಕ್ಷ ಚಾಲಕನಿಗೆ ಗಾಯ

ಸುರತ್ಕಲ್ : ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಭಾನುವಾರ ಸಂಜೆ ನಡೆದಿದೆ.

ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದು, ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ.

ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago