Featured

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ # ಮೂವರ ಬಂಧನ – Vishwanews24

ಮಂಗಳೂರು:‌ ಯುವಕನಿಗೆ ಚೂರಿ ಇರಿತ ಪ್ರಕರಣ – ಮೂವರು ವಶಕ್ಕೆ

ಮಂಗಳೂರು: ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನೋರ್ವನ ಮೇಲೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ಕಳವಾರು ಬೆಂಕಿನಾಥೇಶ್ವರ ದೇವಸ್ಥಾನ ಬಳಿಯ ನಿವಾಸಿ ಪ್ರಶಾಂತ್‌ ಯಾನೆ ಪಚ್ಚು(28), ಕಳವಾರು ಆಶ್ರಯಕಾಲನಿ ನಿವಾಸಿ ಧನರಾಜ್(23) ಮತ್ತು ಕಳವಾರು ಚರ್ಚ್‌ ಗುಡ್ಡೆ ಸೈಟ್‌ ನಿವಾಸಿ ಯಜ್ಞೇಶ್‌(22) ಎಂದು ಗುರುತಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಆರೋಪಿಗಳಿದ್ದು, ಉಳಿದವರಿಗಾಗಿ ಸುರತ್ಕಲ್‌ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಆಗಸ್ಟ್‌ 31ರಂದು ಕಳವಾರಿನಲ್ಲಿ ಗಲಾಟೆಯಲ್ಲಿ ಗಂಟೆ ರಿಯಾಝ್ ಎಂಬಾತನ ಮೇಲೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಸುರತ್ಕಲ್ ಪೊಲೀಸರು ಕಳವಾರಿನಲ್ಲಿ ಸೆ.3ರಂದು ಶಾಂತಿ ಸಭೆಯನ್ನು ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮಾತನಾಡಲಿದೆ ಎಂದು ಅಬ್ದುಲ್ ಸಫ್ಘಾನ್ ಎಂಬಾತನನ್ನು ಆರೋಪಿಗಳು ಕರೆದಿದ್ದರು. ಹೀಗಾಗಿ ಅಬ್ದುಲ್‌ ಸಫ್ವಾನ್‌ ತನ್ನ ಸ್ನೇಹಿತ ಮುಹಮ್ಮದ್‌ ಸಫ್ವಾನ್‌ ಎಂಬಾತನೊಂದಿಗೆ ಸಂಜೆ 7:30ರ ಸುಮಾರಿಗೆ ಕಳವಾರು ಗೆಳೆಯರ ಬಳಗ ಬಸ್ಸು ನಿಲ್ದಾಣದ ಬಳಿ ಬೈಕಿನಲ್ಲಿ ತೆರಳುತ್ತಿದ್ದಾಗ ಎದರುಗಡೆಯಿಂದ ಆರೋಪಿಗಳಾದ ಪ್ರಶಾಂತ್ ಮತ್ತು ಧನರಾಜ್ ಎಂಬವರು ತಮ್ಮ ಬೈಕ್ ನಿಂದ ಅಡ್ಡಗಟ್ಟಿ ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಆರೋಪಿ ಧನರಾಜ್‌ ಮಾರಕಾಸ್ತ್ರದಿಂದ ಅಬ್ದುಲ್‌ ಸಫ್ವಾನ್‌ ನ ಕಣ್ಣಿಗೆ ಬಲವಾಗಿ ಗುದ್ದಿದ್ದಾನೆ. ಆರೋಪಿ ಪ್ರಶಾಂತ ಡ್ರಾಗರ್ ಚೂರಿಯಿಂದ ಸಂತ್ರಸ್ತನ ಬಲ ಕಂಕುಳಕ್ಕೆ ತಿವಿದಿದ್ದಾನೆ.

ತಕ್ಷಣ ಸ್ಥಳಕ್ಕೆ ಬಂದ ಇತರ ಆರೋಪಿಗಳ ಪೈಕಿ ಕಳವಾರು ಗಣೇಶ ಎಂಬಾತ ಸಫ್ವಾನ್‌ ನ ಬಲಕೈ ತೋಳಿಗೆ ಚೂರಿಯಿಂದ ಇರಿದಿದ್ದು, ಯಜ್ಞೇಶ ಎಂಬಾತ ಬೆನ್ನಿಗೆ ಚೂರಿಯಿಂದ ಚುಚ್ಚಿದ್ದಾನೆ. ರಕ್ಷಣೆಗೆ ಬಂದ ಸ್ನೇಹಿತ ಮುಹಮ್ಮದ್‌ ಸಫ್ವಾನ್‌ ನನ್ನು ಆರೋಪಿಗಳಾದ ಪುನೀತ್, ಬಬ್ಬು ಗಣೇಶ್, ಪ್ರದೀಪ್ ಮತ್ತು ಇತರರು ರಕ್ಷಣೆಗೆ ಬಾರದಂತೆ ಕೈಯಿಂದ ಹೊಡೆದು ಬಿಗಿಯಾಗಿ ಹಿಡಿದುಕೊಂಡಿದ್ದರು. ಆಗ ಸಾರ್ವಜನಿಕರು ಸೇರಲು ಆರಂಭಿಸಿದಾಗ ಆರೋಪಿಗಳು ಮುಂದಕ್ಕೆ ಕೊಲ್ಲುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಸಂತ್ರಸ್ತ ಅಬ್ದುಲ್‌ ಸಫ್ವಾನ್‌ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

23 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

23 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago