ಮಂಗಳೂರು: ನಗರದ ಸುರತ್ಕಲ್ ಕೃಷ್ಣಾಪುರ ನಿವಾಸಿ ಅನನ್ಯ(20) ಎಂಬವರು ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನನ್ಯ ಕಾರ್ತಿಕ್ ಎಂಬವರನ್ನು ಪ್ರೀತಿಸುತ್ತಿದ್ದು, ಮನೆಯವರು ಆಕ್ಷೇಪ ವ್ಯಕ್ತ ಪಡಿಸಿದ್ದರಿಂದ ಅವರು ಮನೆಯಲ್ಲೇ ಇದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೋಗಿದ್ದು, ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಮಗಳು ಇಲ್ಲದೇ ಇದ್ದು ಆಸುಪಾಸಿನಲ್ಲಿ ವಿಚಾರಿಸಿಕೊಂಡಾಗ ಅನನ್ಯಳು ಬೆಳಿಗ್ಗೆ ಮನೆಯಿಂದ ಹೋಗಿರುವುದಾಗಿ ತಿಳಿದು ಬಂದಿರುತ್ತದೆ.
ಕಾಣೆಯಾದವರ ಚಹರೆ:- ಎತ್ತರ: 5.3 ಅಡಿ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಶರೀರ, ದಪ್ಪ ಸೈಝ್ ಕನ್ನಡಕ ಮತ್ತು ಕಾಣೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಹಳದಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…