Featured

ಸುರತ್ಕಲ್ : ರಸ್ತೆ ದಾಟಲು ​ಡಿವೈಡರ್ ಬಳಿ ಬೈಕ್ ನಲ್ಲಿ ನಿಂತಿದ್ದ ಇಬ್ಬರು ಯುವಕರಿಗೆ ಬಸ್ ಡಿಕ್ಕಿ * ಗಂಭೀರ ಗಾಯ – Vishwanews24

ಸುರತ್ಕಲ್ : ರಸ್ತೆ ದಾಟಲು ​ಡಿವೈಡರ್ ಬಳಿ ಬೈಕ್ ನಲ್ಲಿ ನಿಂತಿದ್ದ ಇಬ್ಬರು ಯುವಕರಿಗೆ ಬಸ್ ಡಿಕ್ಕಿ * ಗಂಭೀರ ಗಾಯ

ಸುರತ್ಕಲ್ : ರಸ್ತೆ ದಾಟಲೆಂದು ನಿಂತಿದ್ದ ಬೈಕ್​ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್​ವೊಂದು ರಭಸವಾಗಿ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ​ನ ಹೊಸಬೆಟ್ಟು ಸಮೀಪ ನಡೆದಿದೆ.

ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ.

ಭಾನುವಾರ ಬೆಳ್ಳಂಬೆಳಗ್ಗೆ 7.55ರ ವೇಳೆಗೆ ಖಾಸಗಿ ಎಕ್ಸ್‌ಪ್ರೆಸ್​ ಬಸ್​ ಶರವೇಗದಿಂದ ಬಂದು ಬೈಕ್​ಗೆ ಗುದ್ದಿದೆ.

ಈ ಘಟನೆಯಲ್ಲಿ ಬೈಕ್ ಸವಾರರಾದ ಪಕ್ಷಿಕೆರೆ ಹೊಸಕಾಡು ನಿವಾಸಿ ಅಬ್ದುಲ್ ಖಾದರ್ ಅರ್ಫಾನ್ ಮತ್ತು ಹಳೆಯಂಗಡಿ ಇಂದಿರಾ ನಗರದ ನಿವಾಸಿ‌ ಅಮೀರ್ ಸಾಹಿಲ್ ಎಂಬುವವರು ಗಾಯಗೊಂಡಿದ್ದಾರೆ.

ಇದನ್ನೂ ಓದಿ:

ಇದರಲ್ಲಿ ಅರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಬೆಟ್ಟು ಬಳಿ ರಸ್ತೆ ದಾಟಲು ಬೈಕ್​ ಡಿವೈಡರ್ ಬಳಿ ನಿಂತಿತ್ತು.

ಈ ವೇಳೆ ವೇಗದಲ್ಲಿ ಬಂದ ಮಂಗಳೂರು – ಉಡುಪಿ ಖಾಸಗಿ ಬಸ್ ಅಡ್ಡಲಾಗಿ ಬಂದು ಗುದ್ದಿಕೊಂಡು ಹೋಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ತಕ್ಷಣ ಗಾಯಾಳುಗಳನ್ನು ನಗರದ ಎ.ಜೆ. ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್​ ಚಾಲಕ ಡೆಲ್ಸನ್ ಕ್ಯಾಸ್ಟಲಿನೋ ಎಂಬಾತನ ವಿರುದ್ಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Vishwa News 24

Recent Posts

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ…

10 minutes ago

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ      ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…

30 minutes ago

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

18 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

19 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

19 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

19 hours ago