ಸುರತ್ಕಲ್ : ರಸ್ತೆ ದಾಟಲೆಂದು ನಿಂತಿದ್ದ ಬೈಕ್ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್ವೊಂದು ರಭಸವಾಗಿ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ನ ಹೊಸಬೆಟ್ಟು ಸಮೀಪ ನಡೆದಿದೆ.
ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಭಾನುವಾರ ಬೆಳ್ಳಂಬೆಳಗ್ಗೆ 7.55ರ ವೇಳೆಗೆ ಖಾಸಗಿ ಎಕ್ಸ್ಪ್ರೆಸ್ ಬಸ್ ಶರವೇಗದಿಂದ ಬಂದು ಬೈಕ್ಗೆ ಗುದ್ದಿದೆ.
ಈ ಘಟನೆಯಲ್ಲಿ ಬೈಕ್ ಸವಾರರಾದ ಪಕ್ಷಿಕೆರೆ ಹೊಸಕಾಡು ನಿವಾಸಿ ಅಬ್ದುಲ್ ಖಾದರ್ ಅರ್ಫಾನ್ ಮತ್ತು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಮೀರ್ ಸಾಹಿಲ್ ಎಂಬುವವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:
ಇದರಲ್ಲಿ ಅರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಬೆಟ್ಟು ಬಳಿ ರಸ್ತೆ ದಾಟಲು ಬೈಕ್ ಡಿವೈಡರ್ ಬಳಿ ನಿಂತಿತ್ತು.
ಈ ವೇಳೆ ವೇಗದಲ್ಲಿ ಬಂದ ಮಂಗಳೂರು – ಉಡುಪಿ ಖಾಸಗಿ ಬಸ್ ಅಡ್ಡಲಾಗಿ ಬಂದು ಗುದ್ದಿಕೊಂಡು ಹೋಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ತಕ್ಷಣ ಗಾಯಾಳುಗಳನ್ನು ನಗರದ ಎ.ಜೆ. ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಚಾಲಕ ಡೆಲ್ಸನ್ ಕ್ಯಾಸ್ಟಲಿನೋ ಎಂಬಾತನ ವಿರುದ್ಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…