ಸುರತ್ಕಲ್ : ರಸ್ತೆ ದಾಟಲೆಂದು ನಿಂತಿದ್ದ ಬೈಕ್ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಖಾಸಗಿ ಬಸ್ವೊಂದು ರಭಸವಾಗಿ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಭಾನುವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ನ ಹೊಸಬೆಟ್ಟು ಸಮೀಪ ನಡೆದಿದೆ.
ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.
ಭಾನುವಾರ ಬೆಳ್ಳಂಬೆಳಗ್ಗೆ 7.55ರ ವೇಳೆಗೆ ಖಾಸಗಿ ಎಕ್ಸ್ಪ್ರೆಸ್ ಬಸ್ ಶರವೇಗದಿಂದ ಬಂದು ಬೈಕ್ಗೆ ಗುದ್ದಿದೆ.
ಈ ಘಟನೆಯಲ್ಲಿ ಬೈಕ್ ಸವಾರರಾದ ಪಕ್ಷಿಕೆರೆ ಹೊಸಕಾಡು ನಿವಾಸಿ ಅಬ್ದುಲ್ ಖಾದರ್ ಅರ್ಫಾನ್ ಮತ್ತು ಹಳೆಯಂಗಡಿ ಇಂದಿರಾ ನಗರದ ನಿವಾಸಿ ಅಮೀರ್ ಸಾಹಿಲ್ ಎಂಬುವವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:
ಇದರಲ್ಲಿ ಅರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಬೆಟ್ಟು ಬಳಿ ರಸ್ತೆ ದಾಟಲು ಬೈಕ್ ಡಿವೈಡರ್ ಬಳಿ ನಿಂತಿತ್ತು.
ಈ ವೇಳೆ ವೇಗದಲ್ಲಿ ಬಂದ ಮಂಗಳೂರು – ಉಡುಪಿ ಖಾಸಗಿ ಬಸ್ ಅಡ್ಡಲಾಗಿ ಬಂದು ಗುದ್ದಿಕೊಂಡು ಹೋಗಿದೆ. ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.
ತಕ್ಷಣ ಗಾಯಾಳುಗಳನ್ನು ನಗರದ ಎ.ಜೆ. ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಚಾಲಕ ಡೆಲ್ಸನ್ ಕ್ಯಾಸ್ಟಲಿನೋ ಎಂಬಾತನ ವಿರುದ್ಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…