ಸುರತ್ಕಲ್: ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚೇಳೈರು ಗ್ರಾಮದ ಚೇಳೈರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ. ರೈಲ್ವೇ ಸೇತುವೆಯ ಮೇಲ್ಭಾಗದಲ್ಲಿ ಕಂಬಿಗಳನ್ನು ನೇರಮಾಡುತ್ತಿದ್ದ ಸಂದರ್ಭ ಕಾರ್ಮಿಕರು ಕೆಳಭಾಗದಲ್ಲಿ ಗುಡ್ಡ ಅಗೆಯುತ್ತಿದ್ದರು. ಈ ವೇಳೆ ರೈಲೊಂದು ಏಕಾಏಕಿ ಬಂದ ಹಾದುಹೋದ ಪರಿಣಾಮ ಮಣ್ಣು ಕುಸಿದು ಗುಡ್ಡದ ಕೆಳಭಾಗದಲ್ಲಿ ಅಗೆಯುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ.
ಈ ವೇಳೆ ಆರೇಳು ಕಾರ್ಮಿಕರ ಮೇಲೆ ಮಣ್ಣು ಬಿದ್ದಿದೆ. ಈ ಪೈಕಿ ಓಬಳೇಶ್ವರ ಮತ್ತು ಬಳ್ಳಾರಿಯ ಗೋವಿಂದಪ್ಪ ಅವರ ಮೈಮೇಲೆ ಹೆಚ್ಚಿನ ಪ್ರಮಾಣದ ಮಣ್ಣುಬಿದ್ದು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ರಕ್ಷಿಸಿ ಖಾಸಗಿ ಆಸ್ಪತೆರೆಗ ದಾಖಲಿಸಲಾಗಿದ್ದು, ಈ ವೇಳೆ ಓಬಳೇಶ್ವರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಗೋವಿಂದಪ್ಪ ಅವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಕಾರ್ಮಿಕರಾದ ಕಿಟ್ಟರಾಜ ಎಂಬವರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
Join our Whatsapp group by clicking the below link 👇👇
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…