ಸುರತ್ಕಲ್: ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋರ್ಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ ಜಂಕ್ಷನ್ ಬಳಿ ಮಾ.4ರ ಬೆಳಗ್ಗೆ ನಡೆದಿದೆ.
ಆಸ್ಪತ್ರೆಯೊಂದರ ವೈದ್ಯ ಹಾಗೂ ಮತ್ತೊಬ್ಬರು ಆ ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿರುದ್ಧ ದಿಕ್ಕಿನಿಂದ ಸುಭಾಷಿತನಗರ ಕಡೆಗೆ ಹೋಗಲು ಕಾರು ಚಾಲಕ ಏಕಾಏಕಿ ಹೆದ್ದಾರಿಗೆ ನುಗ್ಗಿದ್ದು, ಈ ವೇಳೆ ಉಡುಪಿ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕ ಬಲಬದಿಗೆ ತಿರುಗಿಸಿದ್ದರಿಂದ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪರಾಗಿದ್ದಾರೆ. ಇಲ್ಲದಿದ್ದರೆ ಭೀಕರ ಅಪಘಾತ ಸಂಭವಿಸುತ್ತಿತ್ತು ಎನ್ನಲಾಗುತ್ತದೆ.
ಸ್ಥಳಕ್ಕೆ ಬೈಕಂಪಾಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…