ಮಂಗಳೂರು : ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಕ್ರಮವನ್ನು ಖಂಡಿಸಿದೆ.
ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಿಪಿಐ ನಿಯೋಗವು, ಭಾರತದ ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗಿಯಾಗಿರುವ ಪ್ರಮುಖ ವ್ಯಕ್ತಿಗಳ, ಸ್ವಾತಂತ್ರ್ಯ ಸಂಗ್ರಾಮಗಳಲ್ಲಿ ಪಾಲ್ಗೊಂಡಿರುವ ಸ್ಥಳೀಯರ ಅಥವಾ ಖ್ಯಾತ ಸಾಹಿತಿ, ಕ್ರೀಡೆ, ಕಲೆ ಮುಂತಾದ ಕ್ಷೇತ್ರಗಳಲ್ಲಿನ ಸಾಧಕರ ಹೆಸರನ್ನು ಸ್ಥಳೀಯ ರಸ್ತೆ – ವೃತ್ತಗಳಿಗೆ ಇಡುವುದು ಸಾಮಾನ್ಯ ಕ್ರಮವಾಗಿದೆ.
ಆದರೆ ತನ್ನನ್ನು ತಾನೇ ‘ವೀರ’ ಎಂದು ಕರೆದುಕೊಂಡಿರುವ, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದ ಸಮಯದಲ್ಲಿ ಬ್ರಿಟಿಷ್ ಸರಕಾರಕ್ಕೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟು ಅವರಿಂದ ಪಿಂಚಣಿ ಪಡೆಯುತ್ತಿದ್ದ ಹಿಂದುತ್ವವಾದಿ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕೆಲವರು ಬಿಂಬಿಸಿದರೆ ಅದು ಅವರಿಗಷ್ಟೇ ಸೀಮಿತವಾಗುತ್ತದೆಯೇ ಹೊರತು ದೇಶಕ್ಕಲ್ಲ. ಆದ್ದರಿಂದ ಸಾವರ್ಕರ್ ಹೆಸರನ್ನು ಸುರತ್ಕಲ್ ವೃತ್ತಕ್ಕೆ ಇಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಸಾವರ್ಕರ್ ಬದಲಾಗಿ ಸುರತ್ಕಲ್ ವೃತ್ತಕ್ಕೆ ಮೇಲೆ ಪ್ರಸ್ತಾಪಿಸಿದ ಯಾವುದೇ ವ್ಯಕ್ತಿಯ ಹೆಸರಿಡುವಂತೆ ಸಿಪಿಎಂ ಮನವಿಯಲ್ಲಿ ಒತ್ತಾಯಿಸಿದೆ.
ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24
ಮನವಿ ಸಲ್ಲಿಸಿದ ನಿಯೋಗದಲ್ಲಿ CPI ದ.ಕ. ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಮಾಜಿ ಕಾರ್ಯದರ್ಶಿ ವಿ.ಕುಕ್ಯಾನ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್, AIYFನ ಮಂಗಳೂರಿನ ಕೃಷ್ಣಪ್ಪ ವಾಮಂಜೂರು ಹಾಗೂ ಮಂಗಳೂರು ತಾಲೂಕು ಕಾರ್ಯದರ್ಶಿ ಎಂ.ಕರುಣಾಕರ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…