Featured

ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ವಿರೋಧ: ಮೇಯರ್ ಗೆ ಮನವಿ – Vishwanews24

ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ವಿರೋಧ: ಮೇಯರ್ ಗೆ ಮನವಿ

ಮಂಗಳೂರು :  ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವುದಕ್ಕೆ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಮಂಡಳಿ ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಕ್ರಮವನ್ನು ಖಂಡಿಸಿದೆ.

ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಿಪಿಐ ನಿಯೋಗವು, ಭಾರತದ ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗಿಯಾಗಿರುವ ಪ್ರಮುಖ ವ್ಯಕ್ತಿಗಳ, ಸ್ವಾತಂತ್ರ್ಯ ಸಂಗ್ರಾಮಗಳಲ್ಲಿ ಪಾಲ್ಗೊಂಡಿರುವ ಸ್ಥಳೀಯರ ಅಥವಾ ಖ್ಯಾತ ಸಾಹಿತಿ, ಕ್ರೀಡೆ, ಕಲೆ ಮುಂತಾದ ಕ್ಷೇತ್ರಗಳಲ್ಲಿನ ಸಾಧಕರ ಹೆಸರನ್ನು ಸ್ಥಳೀಯ ರಸ್ತೆ – ವೃತ್ತಗಳಿಗೆ ಇಡುವುದು ಸಾಮಾನ್ಯ ಕ್ರಮವಾಗಿದೆ.

ಮಂಗಳೂರು : ಇರುವೆ ಬಾಧೆಗೊಳಗಾದ ಪಿಲಿಕುಳ ಜೈವಿಕ ಉದ್ಯಾನವನದ ಹಾವು ಸುರಕ್ಷಿತ :ಸ್ಪಷ್ಟನೆ ನೀಡಿದ ಪಶುಪಾಲನಾ ವೈದ್ಯಾಧಿಕಾರಿ – Vishwanews24

ಆದರೆ ತನ್ನನ್ನು ತಾನೇ ‘ವೀರ’ ಎಂದು ಕರೆದುಕೊಂಡಿರುವ, ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದ ಸಮಯದಲ್ಲಿ ಬ್ರಿಟಿಷ್ ಸರಕಾರಕ್ಕೆ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟು ಅವರಿಂದ ಪಿಂಚಣಿ ಪಡೆಯುತ್ತಿದ್ದ ಹಿಂದುತ್ವವಾದಿ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕೆಲವರು ಬಿಂಬಿಸಿದರೆ ಅದು ಅವರಿಗಷ್ಟೇ ಸೀಮಿತವಾಗುತ್ತದೆಯೇ ಹೊರತು ದೇಶಕ್ಕಲ್ಲ. ಆದ್ದರಿಂದ ಸಾವರ್ಕರ್ ಹೆಸರನ್ನು ಸುರತ್ಕಲ್ ವೃತ್ತಕ್ಕೆ ಇಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದೆ.

ಸಾವರ್ಕರ್ ಬದಲಾಗಿ ಸುರತ್ಕಲ್ ವೃತ್ತಕ್ಕೆ ಮೇಲೆ ಪ್ರಸ್ತಾಪಿಸಿದ ಯಾವುದೇ ವ್ಯಕ್ತಿಯ ಹೆಸರಿಡುವಂತೆ ಸಿಪಿಎಂ ಮನವಿಯಲ್ಲಿ ಒತ್ತಾಯಿಸಿದೆ.

ST’ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ : ಎಸ್ ಟಿ ಸಮುದಾಯದ ನಾಯಕರಿಂದ ನಾಳೆ ಸಿಎಂ ಗೆ ಸನ್ಮಾನ – Vishwanews24

ಮನವಿ ಸಲ್ಲಿಸಿದ ನಿಯೋಗದಲ್ಲಿ CPI ದ.ಕ. ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್, ಮಾಜಿ ಕಾರ್ಯದರ್ಶಿ ವಿ.ಕುಕ್ಯಾನ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್, AIYFನ ಮಂಗಳೂರಿನ ಕೃಷ್ಣಪ್ಪ ವಾಮಂಜೂರು ಹಾಗೂ ಮಂಗಳೂರು ತಾಲೂಕು ಕಾರ್ಯದರ್ಶಿ ಎಂ.ಕರುಣಾಕರ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

10 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

10 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

11 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

12 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

12 hours ago