Featured

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ – vishwanews24

ಸುರತ್ಕಲ್ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ

ಸುರತ್ಕಲ್‌ :ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐ ಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು.

ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಹಿನ್ನಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು, ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.

ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ಘೋಷಿಸಿದರು. ಕಾಲಮಿತಿಯ ಒಳಗಡೆ ವರದಿ ಪಡೆದು ಕ್ರಮ ಕೈಗೊಳ್ಳುವುದು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಮುಕ್ಕದಲ್ಲಿ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್‌ ಫರ್ಹಾನ್‌ ನನ್ನು ಸುರತ್ಕಲ್‌ ನಲ್ಲಿರುವ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎನ್ನಲಾಗಿದೆ.

ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.

ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago