ಸುರತ್ಕಲ್ :ರಸ್ತೆ ಅಪಘಾತದಲ್ಲಿ ಕಾಲಿಗೆ ಸಣ್ಣ ಗಾಯಗೊಂಡಿದ್ದ ಬಾಲಕ ಕುಳಾಯಿ ನಿವಾಸಿ ಅರ್ಫಾನ್ (16) ಎಂಬಾತ ಸುರತ್ಕಲ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತ ಪಟ್ಟಿದ್ದಾನೆ ಎಂದು ಕುಟುಂಬಸ್ಥರು ಹಾಗು ಗ್ರಾಮಸ್ಥರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು. ಸ್ಥಳಕ್ಕೆ ಸಿಪಿಐ ಎಂ ಮುಖಂಡರಾದ ಮುನೀರ್ ಕಾಟಿಪಳ್ಳ,ಕಾಂಗ್ರೆಸ್ ಮುಖಂಡರಾದ ಇನಾಯತ್ ಅಲಿ ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್, ಕಾಂಗ್ರೆಸ್ ಮುಖಂಡ ಪುರುಷೋತ್ತಮ ಚಿತ್ರಾಪುರ ಆಗಮಿಸಿ ಆಕ್ರೋಶಿತರನ್ನು ಸಮಾಧಾನಿಸಿದರು.
ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆಯ ಹಿನ್ನಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಮುಖಂಡರು, ಮೃತರ ಕುಟುಂಬಸ್ಥರು, ಆಸ್ಪತ್ರೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಮುಖಂಡರ ಬೇಡಿಕೆಯಂತೆ ಪ್ರಕರಣದ ತನಿಖೆಗಾಗಿ ಖಾಸಗಿ ವೈದ್ಯರನ್ನು ಒಳಗೊಂಡ ಎಂಟು ಜನ ತಜ್ಞ ವೈದ್ಯರ ತಂಡವನ್ನು ರಚಿಸುವುದಾಗಿ ಘೋಷಿಸಿದರು. ಕಾಲಮಿತಿಯ ಒಳಗಡೆ ವರದಿ ಪಡೆದು ಕ್ರಮ ಕೈಗೊಳ್ಳುವುದು, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಜರುಗಿಸುವುದಾಗಿ ತಿಳಿಸಿದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ರಾತ್ರಿ 8 ಗಂಟೆಗೆ ಸುರತ್ಕಲ್ ಮುಕ್ಕದಲ್ಲಿ ಅಪಘಾತ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ಮೊಯ್ದಿನ್ ಫರ್ಹಾನ್ ನನ್ನು ಸುರತ್ಕಲ್ ನಲ್ಲಿರುವ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತ ನಡೆದ ಬಳಿಕ ಬಾಲಕ ಮನೆಯವರು ಹಾಗು ಸ್ನೇಹಿತರೊಂದಿಗೆ ಮಾತನಾಡಿದ್ದ ಎನ್ನಲಾಗಿದೆ.
ತುರ್ತು ಶಸ್ತ್ರಚಿಕಿತ್ಸೆ ನಡೆಸಲು ಹೇಳಿದ್ದ ವೈದ್ಯಾಧಿಕಾರಿ ಶಸ್ತ್ರ ಚಿಕಿತ್ಸೆಯ ವೇಳೆ ನೀಡಿದ್ದ ಅನಸ್ತೇಶಿಯಾ ಓವರ್ ಡೋಸ್ ನೀಡಿದ ಪರಿಣಾಮ ಬಾಲಕ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪ ಮಾಡಿದ್ದಾರೆ.
ಇಂದು ಬೆಳಗ್ಗೆ 9ಕ್ಕೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮಧ್ಯಾಹ್ನವಾದರೂ ಎಚ್ಚರಗೊಳ್ಳದ ಬಾಲಕ ನಂತರ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಶಸ್ತ್ರ ಚಿಕಿತ್ಸೆಯ ನೆಪದಲ್ಲಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…