ಸುರತ್ಕಲ್: ಸಮುದ್ರ ವೀಕ್ಷಣಗೆ ಬಂದಿದ್ದ ಇಬ್ಬರು ಸಮುದ್ರ ಪಾಲಾಗಿ, ಓರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಬೀಚ್ ನಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ.
ಮೃತನನ್ನು ವಿವೇಕಾನಂದ ಬಂಜನ್ ಅವರ ಪುತ್ರ ಧ್ಯಾನ್ ಬಂಜನ್ (18) ಮತ್ತು ಮೂಲತಃ ಸೂರಿಂಜೆ ನಿವಾಸಿ ಮುಂಬೈನಲ್ಲಿ ಉದ್ಯೋಗಿಯಾಗಿರುವ ಉಮೇಶ್ ಕುಲಾಲ್ ಎಂಬವರ ಮಗ ಅನೀಶ್ ಕುಲಾಲ್ (15) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೂರಿಂಜೆಯ ಪ್ರಖ್ಯಾತ ಎಂಬವರ ಮನೆಗೆ ಮದುವೆ ಸಮಾರಂಭಕ್ಕೆಂದು ಮುಂಬೈನಿಂದ ಬಂದಿದ್ದ 10 ಮಂದಿ ಸದಸ್ಯರ ತಂಡ ಮಂಗಳವಾರ ಸಂಜೆಯ ವೇಳೆಗೆ ಎನ್ಐಟಿಕೆ ಬೀಚ್ಗೆ ವಿಹಾರಕ್ಕೆಂದು ಬಂದಿತ್ತು. ಈ ವೇಳೆ ಬೃಹತ್ ಅಲೆಯ ರಭಸಕ್ಕೆ ನೀರಿನಲ್ಲಿ ಆಟವಾಡುತ್ತಿದ್ದ ಧ್ಯಾನ್ ಮತ್ತು ಅನೀಶ್ ಸಮುದ್ರ ಪಾಲಾಗಿದ್ದರು.
ತಕ್ಷಣ ಎಚ್ಚೆತ್ತುಕೊಂಡ ಲೈಫ್ ಗಾರ್ಡ್ ಸಿಬ್ಬಂದಿ ಸಮುದ್ರಕ್ಕೆ ದುಮುಕಿ ಧ್ಯಾನ್ ಬಂಜನ್ ರನ್ನು ರಕ್ಷಿಸಿ ಸುರತ್ಕಲ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಅಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಸದ್ಯ ಅನೀಶ್ ಕುಲಾಲ್ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಆತನಿಗಾಗಿ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಜೀವ ರಕ್ಷಕರ ತಂಡ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದು ಬಂದಿದೆ.
ಸೂರಿಂಜೆಯ ಪ್ರಖ್ಯಾತ್ರ ಮನೆಯಲ್ಲಿ ನಾಪತ್ತೆಯಾಗಿರುವ ಅನೀಶ್ ಕುಲಾಲ್ ರ ದೊಡ್ಡಪ್ಪನ ಮಗಳ ವಿವಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂಬೈನಿಂದ ಸಂಬಂಧಿಕರು ಬಂದಿದ್ದರು. ಸೋಮವಾರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಬುಧವಾರ ಮೂಡುಬಿದಿರೆಯಲ್ಲಿ ಮದುವೆ ಕಾರ್ಯಕ್ರಮ ನಡೆಯಲಿತ್ತು. ಈ ನಡುವೆ ಈ ದುರಂತ ಕುಟುಂಭಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…