Featured

ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ – vishwanews24

ಸುರತ್ಕಲ್‌: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಮೃತ್ಯು; ಇನ್ನೋರ್ವ ನಾಪತ್ತೆ

ಸುರತ್ಕಲ್‌: ಸಮುದ್ರ ವೀಕ್ಷಣಗೆ ಬಂದಿದ್ದ ಇಬ್ಬರು ಸಮುದ್ರ ಪಾಲಾಗಿ, ಓರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಎನ್‌ಐಟಿಕೆ ಬೀಚ್‌ ನಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ.

ಮೃತನನ್ನು ವಿವೇಕಾನಂದ ಬಂಜನ್ ಅವರ ಪುತ್ರ ಧ್ಯಾನ್ ಬಂಜನ್ (18) ಮತ್ತು ಮೂಲತಃ ಸೂರಿಂಜೆ ನಿವಾಸಿ ಮುಂಬೈನಲ್ಲಿ ಉದ್ಯೋಗಿಯಾಗಿರುವ ಉಮೇಶ್‌ ಕುಲಾಲ್‌ ಎಂಬವರ ಮಗ ಅನೀಶ್‌ ಕುಲಾಲ್‌ (15) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೂರಿಂಜೆಯ ಪ್ರಖ್ಯಾತ ಎಂಬವರ ಮನೆಗೆ ಮದುವೆ ಸಮಾರಂಭಕ್ಕೆಂದು ಮುಂಬೈನಿಂದ ಬಂದಿದ್ದ 10 ಮಂದಿ ಸದಸ್ಯರ ತಂಡ ಮಂಗಳವಾರ ಸಂಜೆಯ ವೇಳೆಗೆ ಎನ್‌ಐಟಿಕೆ ಬೀಚ್‌ಗೆ ವಿಹಾರಕ್ಕೆಂದು ಬಂದಿತ್ತು. ಈ ವೇಳೆ ಬೃಹತ್‌ ಅಲೆಯ ರಭಸಕ್ಕೆ ನೀರಿನಲ್ಲಿ ಆಟವಾಡುತ್ತಿದ್ದ ಧ್ಯಾನ್‌ ಮತ್ತು ಅನೀಶ್‌ ಸಮುದ್ರ ಪಾಲಾಗಿದ್ದರು.

ತಕ್ಷಣ ಎಚ್ಚೆತ್ತುಕೊಂಡ ಲೈಫ್‌ ಗಾರ್ಡ್‌ ಸಿಬ್ಬಂದಿ ಸಮುದ್ರಕ್ಕೆ ದುಮುಕಿ ಧ್ಯಾನ್ ಬಂಜನ್ ರನ್ನು ರಕ್ಷಿಸಿ ಸುರತ್ಕಲ್‌ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಅಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಸದ್ಯ ಅನೀಶ್‌ ಕುಲಾಲ್‌ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಆತನಿಗಾಗಿ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಜೀವ ರಕ್ಷಕರ ತಂಡ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದು ಬಂದಿದೆ.

ಸೂರಿಂಜೆಯ ಪ್ರಖ್ಯಾತ್‌ರ ಮನೆಯಲ್ಲಿ ನಾಪತ್ತೆಯಾಗಿರುವ ಅನೀಶ್‌ ಕುಲಾಲ್‌ ರ ದೊಡ್ಡಪ್ಪನ ಮಗಳ ವಿವಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂಬೈನಿಂದ ಸಂಬಂಧಿಕರು ಬಂದಿದ್ದರು. ಸೋಮವಾರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಬುಧವಾರ ಮೂಡುಬಿದಿರೆಯಲ್ಲಿ ಮದುವೆ ಕಾರ್ಯಕ್ರಮ ನಡೆಯಲಿತ್ತು. ಈ ನಡುವೆ ಈ ದುರಂತ ಕುಟುಂಭಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ.

Vishwa News 24

Recent Posts

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

27 minutes ago

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…

1 hour ago

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ – vishwanews24

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…

2 hours ago

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗ ಯಾತ್ರೆ – vishwanews24

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…

3 hours ago

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…

3 hours ago

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…

3 hours ago