ಸುರತ್ಕಲ್: ಸಮುದ್ರ ವೀಕ್ಷಣಗೆ ಬಂದಿದ್ದ ಇಬ್ಬರು ಸಮುದ್ರ ಪಾಲಾಗಿ, ಓರ್ವ ಮೃತಪಟ್ಟು ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಬೀಚ್ ನಲ್ಲಿ ಮಂಗಳವಾರ ಸಂಜೆ ವರದಿಯಾಗಿದೆ.
ಮೃತನನ್ನು ವಿವೇಕಾನಂದ ಬಂಜನ್ ಅವರ ಪುತ್ರ ಧ್ಯಾನ್ ಬಂಜನ್ (18) ಮತ್ತು ಮೂಲತಃ ಸೂರಿಂಜೆ ನಿವಾಸಿ ಮುಂಬೈನಲ್ಲಿ ಉದ್ಯೋಗಿಯಾಗಿರುವ ಉಮೇಶ್ ಕುಲಾಲ್ ಎಂಬವರ ಮಗ ಅನೀಶ್ ಕುಲಾಲ್ (15) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೂರಿಂಜೆಯ ಪ್ರಖ್ಯಾತ ಎಂಬವರ ಮನೆಗೆ ಮದುವೆ ಸಮಾರಂಭಕ್ಕೆಂದು ಮುಂಬೈನಿಂದ ಬಂದಿದ್ದ 10 ಮಂದಿ ಸದಸ್ಯರ ತಂಡ ಮಂಗಳವಾರ ಸಂಜೆಯ ವೇಳೆಗೆ ಎನ್ಐಟಿಕೆ ಬೀಚ್ಗೆ ವಿಹಾರಕ್ಕೆಂದು ಬಂದಿತ್ತು. ಈ ವೇಳೆ ಬೃಹತ್ ಅಲೆಯ ರಭಸಕ್ಕೆ ನೀರಿನಲ್ಲಿ ಆಟವಾಡುತ್ತಿದ್ದ ಧ್ಯಾನ್ ಮತ್ತು ಅನೀಶ್ ಸಮುದ್ರ ಪಾಲಾಗಿದ್ದರು.
ತಕ್ಷಣ ಎಚ್ಚೆತ್ತುಕೊಂಡ ಲೈಫ್ ಗಾರ್ಡ್ ಸಿಬ್ಬಂದಿ ಸಮುದ್ರಕ್ಕೆ ದುಮುಕಿ ಧ್ಯಾನ್ ಬಂಜನ್ ರನ್ನು ರಕ್ಷಿಸಿ ಸುರತ್ಕಲ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಅಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಸದ್ಯ ಅನೀಶ್ ಕುಲಾಲ್ ಸಮುದ್ರದಲ್ಲಿ ನಾಪತ್ತೆಯಾಗಿದ್ದು ಆತನಿಗಾಗಿ ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಜೀವ ರಕ್ಷಕರ ತಂಡ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದು ಬಂದಿದೆ.
ಸೂರಿಂಜೆಯ ಪ್ರಖ್ಯಾತ್ರ ಮನೆಯಲ್ಲಿ ನಾಪತ್ತೆಯಾಗಿರುವ ಅನೀಶ್ ಕುಲಾಲ್ ರ ದೊಡ್ಡಪ್ಪನ ಮಗಳ ವಿವಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂಬೈನಿಂದ ಸಂಬಂಧಿಕರು ಬಂದಿದ್ದರು. ಸೋಮವಾರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆದಿತ್ತು. ಬುಧವಾರ ಮೂಡುಬಿದಿರೆಯಲ್ಲಿ ಮದುವೆ ಕಾರ್ಯಕ್ರಮ ನಡೆಯಲಿತ್ತು. ಈ ನಡುವೆ ಈ ದುರಂತ ಕುಟುಂಭಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…