ಸುರತ್ಕಲ್: ಮುಂಚೂರು ಸಮೀಪದ ಮೋದಿನಗರ ಹಾಗೂ ಪದ್ಮಶ್ರೀ ಲೇಔಟ್ ಬಡಾವಣೆಗಳಲ್ಲಿ ಕಳ್ಳರು ನಾಲ್ಕು ಮನೆಗಳ ಬಾಗಿಲು ಮುರಿದು ಮನೆಯೊಂದರಲ್ಲಿದ್ದ ಬೆಳ್ಳಿ ದೀಪ ಸಹಿತ 50,000 ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.
ಅಲ್ಲದೆ ಈ ಬಡಾವಣೆಯ ಏಳೆಂಟು ಮನೆಗಳ ಗೇಟು ತೆರೆದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಕಳ್ಳರ ಚಲನ ವಲನ ಬಡಾವಣೆಯಲ್ಲಿದ್ದ ಮನೆಗಳ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.
ಇಬ್ಬರು ಕಳ್ಳರ ಕೃತ್ಯವಾಗಿದ್ದು ಕೈಯಲ್ಲಿ ಕತ್ತಿ, ಬ್ಯಾಗುಗಳಲ್ಲಿ ಆಯುಧ ಇಟ್ಟು ಕೊಂಡಿರುವ ಸಾಧ್ಯತೆಯಿದ್ದು, ಬಾಗಿಲು ಮುರಿಯಲು ಲಿವರ್ನಂತಹ ಚೂಪಾದ ವಸ್ತುಗಳನ್ನು ಬಳಸಿರುವ ಶಂಕೆ ವ್ಯಕ್ತವಾಗಿದೆ.
ಬಡಾವಣೆಯಲ್ಲಿ ಯಾರು ವಾಸ ಇಲ್ಲದಂತಹ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡಿದ್ದು. ಉಳಿದ ಮನೆಗಳಲ್ಲಿ ನಾಯಿಗಳು ಬೊಗಳುವ ಸದ್ದು ಕೇಳಿ ಹಿಂದಿರುಗಿದ್ದಾರೆ. ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…