ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ವೃತ್ತ ಎಂದು ಮರು ನಾಮಕರಣ ಮಾಡುವ ಪ್ರಸ್ತಾವವನ್ನು ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಸ್ವೀಕರಿಸಲಾಗಿದೆ.
ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ವೃತ್ತಕ್ಕೆ ವೀರ ಸಾವರ್ಕರ್ ಹೆಸರನ್ನು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಸಭೆಯ ಮುಂದಿಟ್ಟಿದ್ದರು. 2021ರ ಆಗಸ್ಟ್ 3ರಂದು ನಡೆದ ಸಭೆಯಲ್ಲಿ ಸ್ಟ್ಯಾಂಡಿಂಗ್ ಕಮಿಟಿಗೆ ಕಳುಹಿಸಲಾಗಿತ್ತು. ಆದರೆ ಪಾಲಿಕೆ ಸದಸ್ಯರಾದ ಎ.ಸಿ. ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ ಇದನ್ನು ವಿರೋಧಿಸಿದ್ದರು. ಬಳಿಕ ಸ್ಟ್ಯಾಂಡಿಂಗ್ ಕಮಿಟಿಯು ಸ್ಥಳ ಪರಿಶೀಲನೆ ನಡೆಸಿ ವರದಿಯನ್ನು ಕೌನ್ಸಿಲ್ ಸಭೆಯಲ್ಲಿ ಮಂಡಿಸಿತ್ತು. ಈ ವೇಳೆಯೂ ಸದಸ್ಯರಾದ ಕೇಶವ ಮತ್ತು ಶಂಶುದ್ದೀನ್ ಅವರು ವಿರೋಧಿಸಿದ್ದರು ಆದರೇ ಅದೇ ವಾರ್ಡಿನ ಸದಸ್ಯರಾದ ವರುಣ್ ಚೌಟ ಸಾವರ್ಕರ್ ವೃತ್ತ ಮರುನಾಮಕರಣ ವಿಚಾರದಲ್ಲಿ ಬೆಂಬಲಿಸಿ ಸ್ವಾಗತಿಸಿದ್ದರು.
ಸದ್ಯ ಪ್ರಸ್ತಾವವನ್ನು ಪಾಲಿಕೆ ಸ್ವೀಕರಿಸಿದ್ದು, ಈ ಸಂಬಂಧ ದಿನಪತ್ರಿಕೆಗಳಲ್ಲಿ ಮಾಹಿತಿ ನೀಡಿ ಜನರಿಂದ ಸಲಹೆಗಳನ್ನು ಆಹ್ವಾನಿಸಲಿದೆ. ಆ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಕೆಲ ತಿಂಗಳ ಹಿಂದಷ್ಟೇ ಈ ಜಂಕ್ಷನ್ನಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿತ್ತು. ಇದನ್ನು ಕೆಲವು ನಾಗರಿಕರು ವಿರೋಧಿಸಿದ್ದರು. ಬಳಿಕ ಪಾಲಿಕೆ ಅಧಿಕಾರಿಗಳು ಫ್ಲೆಕ್ಸ್ ತೆರವುಗೊಳಿಸಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…