ಸುರತ್ಕಲ್: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಸಿಹಿತ್ಲು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.
ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ.
ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ ಎಂಬವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಕುಟುಂಬದ ಆರು ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮೂಂಡಾ ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಅವರು ನೀರಿನಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ ಸಿಲುಕಿ ಮುಹಮ್ಮದ್ ಸಮೀರ್, ಐಮಾನ್, ಫಾಝಿಲ್ ಸಮುದ್ರ ಪಾಲಾಗುತ್ತಿದ್ದರು ಎನ್ನಲಾಗಿದೆ.
ಈ ವೇಳೆ ದಡದಲ್ಲಿದ್ದವರು ಬೊಬ್ಬೆ ಹಾಕಿದ್ದು, ಬೊಬ್ಬೆಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಪೈಕಿ, ಐಮಾಮ್ ಮತ್ತು ಫಾಝಿಲ್ ಅಪಾಯದಿಂದ ಪಾರಾಗಿದ್ದು, ಮುಹಮ್ಮದ್ ಸಮೀರ್ ಮೃತಪಟ್ಟರೆಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…