ಸುರತ್ಕಲ್: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಸಸಿಹಿತ್ಲು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.
ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ದಿ. ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ.
ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ ಎಂಬವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಕುಟುಂಬದ ಆರು ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮೂಂಡಾ ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಅವರು ನೀರಿನಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ ಸಿಲುಕಿ ಮುಹಮ್ಮದ್ ಸಮೀರ್, ಐಮಾನ್, ಫಾಝಿಲ್ ಸಮುದ್ರ ಪಾಲಾಗುತ್ತಿದ್ದರು ಎನ್ನಲಾಗಿದೆ.
ಈ ವೇಳೆ ದಡದಲ್ಲಿದ್ದವರು ಬೊಬ್ಬೆ ಹಾಕಿದ್ದು, ಬೊಬ್ಬೆಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಪೈಕಿ, ಐಮಾಮ್ ಮತ್ತು ಫಾಝಿಲ್ ಅಪಾಯದಿಂದ ಪಾರಾಗಿದ್ದು, ಮುಹಮ್ಮದ್ ಸಮೀರ್ ಮೃತಪಟ್ಟರೆಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…