ಸುರತ್ಕಲ್: ಸ್ನೇಹಿತರಿಂದ ಪಡೆದಿದ್ದ ಸಾಲ ಹಿಂದಿರುಗಿಸಲು ಸಾಧ್ಯವಾಗದೆ ಯುವಕನೋರ್ವ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಮಲ್ಲಮಾರ್ ಬೀಚ್ನಲ್ಲಿ ಸೋಮವಾರ ನಡೆದಿದೆ.
ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿ’ಸೋಜಾ (20) ಮೃತ ಯುವಕ.
ಕೆಲಸದಿಂದ ರಜೆ ಪಡೆದಿದ್ದ ಅವರು ಸೋಮವಾರ ಬೆಳಗ್ಗೆ 11.30ಕ್ಕೆ ಮನೆ ಬಿಟ್ಟು ತೆರಳಿದ್ದು, ತಾಯಿ ಹುಡುಕಾಟ ನಡೆಸಿದಾಗ ಡೆತ್ನೋಟ್ ಪತ್ತೆಯಾಗಿತ್ತು. ತತ್ಕ್ಷಣ ಹುಡುಕಾಡಿದರೂ ಪತ್ತೆಯಾಗಲಿಲ್ಲ. 3 ಗಂಟೆಯ ಹೊತ್ತಿಗೆ ಅವರ ಮೃತದೇಹ ಸುರತ್ಕಲ್ ಬೀಚ್ ಬಳಿ ಕಂಡುಬಂದಿದೆ.
ಸ್ನೇಹಿತರಿಗೆ, ಅಮ್ಮನಿಂದ ಚಿನ್ನ ಪಡೆದು ಅಡವಿರಿಸಿ ಸಾಲ ಪಡೆದಿದ್ದು, ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…